ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿ ಲ್ಯಾಂಡಿಂಗ್ ಗಾಗಿ ಪುತ್ತಿಲ ಪರಿವಾರದಿಂದ ವಿಶೇಷ ಪ್ರಾರ್ಥನೆ

0

ಪುತ್ತೂರು: ಈಗಾಗಲೇ ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶ ಭಾರತ ಆಗಿದ್ದು ಇಂದು ಸಂಜೆ 6 ಸಮಯಕ್ಕೆ ಚಂದ್ರಯಾನ-3 ನೌಕೆ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ಮೂಲಕ ನಮ್ಮ ಭಾರತ ಇತಿಹಾಸ ಬರೆಯಲಿದೆ. ಈ ಕ್ಷಣದಲ್ಲಿ ಭಾರತಕ್ಕೆ ಗೆಲುವು ಸಿಗಲೆಂದು ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತಿಲ ಪರಿವಾರದ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ವಿಶ್ವವೇ ಭಾರತದ ಸಾಧನೆಗೆ ಕಣ್ಣೆತ್ತಿ ನೋಡುತ್ತಿರುವ ಈ ಸಂದರ್ಭದಲ್ಲಿ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿ ಲ್ಯಾಂಡಿಗ್‌ ಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ರಾಜ್ ಶೆಟ್ಟಿ , ಪ್ರವೀಣ್ ಭಂಡಾರಿ, ರವಿ ಶೆಟ್ಟಿ, ಪ್ರಕಾಶ್, ಶನ್ಮಿತ್, ಮನೀಶ್ ಬನ್ನೂರು, ದಯಾನಂದ ರೈ ಪ್ರಾರ್ಥನೆ ಸಂದರ್ಭ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here