ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ ಗೆಲುವಿಗೆ ಪುತ್ತಿಲ ಪರಿವಾರದಿಂದ ವಿಶೇಷ ಪ್ರಾರ್ಥನೆ

0

ಪುತ್ತೂರು: ಭಾರತ ಪಾಲಿಗೆ ಐತಿಹಾಸಿಕ ಕ್ಷಣಕ್ಕಾಗಿ ಕಾಯುತ್ತಿರುವ 18 ವರ್ಷ ವಯಸ್ಸಿನ ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ FIDE ಚೆಸ್ ವರ್ಲ್ಡ್ ಕಪ್ ನ ನಂಬರ್ ವನ್ ರ‍್ಯಾಂಕ್ ನ ಮ್ಯಾಗ್ನಸ್ ಕಾರ್ಲ್ ಸನ್ ಜೊತೆಗೆ 2 ನೇ ಸುತ್ತಿನ ಆಟ ನಡೆಯಲಿದೆ. ಈ ಪಂದ್ಯಾಟದಲ್ಲಿ ಪ್ರಜ್ಞಾನಂದ ಚಾಂಪಿಯನ್‌ ಆಗಿ ಹೊರ ಹೊಮ್ಮಲಿ ಎಂದು ಪುತ್ತಿಲ ಪರಿವಾರದ ವತಿಯಿಂದ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ರಾಜ್ ಶೆಟ್ಟಿ , ಪ್ರವೀಣ್ ಭಂಡಾರಿ, ರವಿ ಶೆಟ್ಟಿ, ಪ್ರಕಾಶ್, ಶನ್ಮಿತ್, ಮನೀಶ್ ಬನ್ನೂರು, ದಯಾನಂದ ರೈ ಪ್ರಾರ್ಥನೆ ಸಂದರ್ಭ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here