ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸರ್ವೆ ಕಲ್ಪಣೆ ಪ್ರೌಢಶಾಲೆ ಪ್ರಥಮ

0

ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಪ್ರೌಢ ಶಾಲೆಯಲ್ಲಿ ಆ.22ರಂದು ನಡೆದ ಸವಣೂರು ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸರ್ವೆ ಕಲ್ಪಣೆ ಸರಕಾರಿ ಪ್ರೌಢ ಶಾಲೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಫೈನಲ್ ಪಂದ್ಯಾಟದಲ್ಲಿ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದುಕೊಂಡಿತು. ಶಾಲಾ ದೈ.ಶಿ.ಶಿಕ್ಷಕ ಸಹದೇವ್ ಅವರು ತರಬೇತಿ ನೀಡಿದ್ದು, ಶಾಲಾ ಮುಖ್ಯಗುರು ಜಯರಾಮ ಶೆಟ್ಟಿ ಕೆ ಹಾಗೂ ಶಿಕ್ಷಕ ವೃಂದದವರು, ಶಾಲಾಭಿವೃದ್ಧಿ ಸಮಿತಿಯವರು ಸಹಕಾರ ನೀಡಿದ್ದಾರೆ.

LEAVE A REPLY

Please enter your comment!
Please enter your name here