![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯುವಂತಾಗಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ವತಿಯಿಂದ ಹನುಮಾನ್ ಚಾಲಿಸ ಪಠಣ ಹಾಗೂ ಪ್ರಾರ್ಥನೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತ್ತಡ್ಕ,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಉಪಾಧ್ಯಕ್ಷರು ಸತೀಶ್ ಬಿ.ಎಸ್,ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಮಾತೃಶಕ್ತಿ ಪ್ರಮುಖರಾದ ಪ್ರೇಮಲತಾ ರಾವ್,ಪ್ರಮುಖರಾರ ಸೀತಾರಾಮ ರೈ ಕೆದಂಬಾಡಿಗುತ್ತು,ನಗರ ಪ್ರಖಂಡ ಕಾರ್ಯದರ್ಶಿ ಜಿತೇಶ್ ಬಲ್ನಾಡ್,ನಗರ ಪ್ರಖಂಡ ಸಂಯೋಜಕ್ ಜಯಂತ್ ಕುಂಜೂರುಪಂಜ, ಗ್ರಾಮಾಂತರ ಪ್ರಖಂಡ ಬಜರಂಗದಳ ಸಂಯೋಜಕ್ ವಿಶಾಕ್ ಸಸಿಹಿತ್ಲು,ಪ್ರಮುಖರಾದ ಪ್ರವೀಣ್ ಹಸಂತ್ತಡ್ಕ,ರಮ್ಯ ಬಲ್ನಾಡ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/08/19a603a1-a638-45c9-9a27-c28a1b2611e7.jpg)