ರಾಷ್ಟೀಯ ಗ್ರಂಥಪಾಲಕರ ದಿನಾಚರಣೆ ಮತ್ತು ರಾಜ್ಯ ಮಟ್ಟದ ಕಾರ್ಯಾಗಾರ

0

ಪುತ್ತೂರು: ದಕ್ಷಿಣ ಕನ್ನಡ – ಉಡುಪಿ-ಕೊಡಗು ಜಿಲ್ಲಾ ಗ್ರಂಥಾಲಯಗಳ ಸಂಘ ಹಾಗೂ ಡಾ ದಯಾನಂದ ಪೈ -ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ಜಂಟಿಯಾಗಿ ಆಯೋಜಿಸಿದ ರಾಷ್ಟೀಯ ಗ್ರಂಥಪಾಲಕರ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಕಾರ್ಯಾಗಾರವು ನಡೆಯಿತು.

ಕಾರ್ಯಕ್ರಮವನ್ನು ಕೆನರಾ ಪದವಿ ಪೂರ್ವ ಕಾಲೇಜಿನ ಹಿರಿಯ ಕನ್ನಡ ಉಪನ್ಯಾಸ, ಲೇಖಕ ರಘು ಇಡ್ಕಿದು ಉದ್ಘಾಟಿಸಿದರು. ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.


ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಹಾಗೂ ಅತಿಥಿಗಳು ಡಾ. ಎಸ್ ಆರ್ ರಂಗನಾಥನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನಗಳನ್ನು ಸಲ್ಲಿಸಿದರು. ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಅಧ್ಯಕ್ಷರಾದ ಡಾ. ಉಮೇಶ್ ನಾಯಕ್ ರವರು ಗ್ರಂಥಾಲಯ ವೃತ್ತಿಪರರಿಗಾಗಿ ತೆರೆದ ಸಾಫ್ಟ್ ವೇರ್ ಪರಿಕರಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.


ಮುಖ್ಯ ಅತಿಥಿಯಾಗಿ ಆಗಮಿಸಿದ ಕನ್ನಡ-ತುಳು ಹೆಸರಾಂತ ಲೇಖಕರು ಹಾಗೂ ಕೆನರಾ ಪಿಯು ಕಾಲೇಜಿನ ಉಪನ್ಯಾಸಕ ರಘು ಇಡ್ಕಿಡು ಮಾತನಾಡಿ ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು ಆದರೆ ಕನಸಿಲ್ಲದ ದಾರಿಯಲ್ಲಿ ನಡೆಯುವುದು ಬಲು ಕಷ್ಟ ಈ ಕನಸನ್ನು ನನಸು ಮಾಡುವುದು ಪುಸ್ತಕಗಳು ಎಂದು ತಿಳಿಸುವುದರ ಮೂಲಕ ಗ್ರಂಥಪಾಲಕರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ ಎಂಬುದಾಗಿ ಹೇಳಿದರು.


2022-23 ನೇ ಸಾಲಿನಲ್ಲಿ ನಿವೃತ್ತಿ ಹೊಂದಿದ ಗ್ರಂಥಪಾಲಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.ಶ್ರೀ ಕುಕ್ಕೆ ಸುಬ್ರಹ್ಮಣ್ಯೇಶ್ವರ ಕಾಲೇಜು ಸುಬ್ರಮಣ್ಯ ಸುನಿತಾ , ಕೇಂದ್ರೀಯ ವಿದ್ಯಾಲಯ ಸಂಘಟನ್ ಶಂಕರ್ ನಾರಾಯಣ ಭಟ್ , ಜಾನಪದ ವಿಶ್ವವಿದ್ಯಾನಿಲಯ ಹಾವೇರಿ ಇಲ್ಲಿಗೆ ಮುಖ್ಯ ಗ್ರಂಥ ಪಾಲಕರಾಗಿ ಆಯ್ಕೆಯಾದ ಸಂಘದ ನಿಕಟಪೂರ್ವ ಕಾರ್ಯದರ್ಶಿ ಡಾ. ರಾಜಶೇಖರ ಕುಂಬಾರ್ ಮತ್ತು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದ ರೇಣುಕಾ ಇವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಸಂಘದ ಕಾರ್ಯದರ್ಶಿ ರಾಮ ಕೆ ನೆರವೇರಿಸಿದರು.


ಈ ಸಂಧರ್ಭದಲ್ಲಿ ಸಂಘದ ನ್ಯೂಸ್ ಬುಲೆಟಿನನ್ನು ವೇದಿಕೆಯಲ್ಲಿನ ಗಣ್ಯರು ಬಿಡುಗಡೆಗೊಳಿಸಿದರು. ಬುಲೆಟಿನ್ ಎಡಿಟರ್ ಹಾಗೂ ಸಂಘದ ಸಾರ್ವಜನಿಕ ಸಂಪರ್ಕ ಆಧಿಕಾರಿ ಡಾ ವನಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕರಾದ ಕಾಲೇಜಿನ ಗ್ರಂಥ ಪಾಲಕಿ ಉಮಾ ಎ ಬಿ, ಜತೆ ಕಾರ್ಯದರ್ಶಿ ಅನಿಲ್ ಕುಮಾರ್ ಉಪಸ್ಥಿತರಿದ್ದರು.ಸಂಘದ ಅಧ್ಯಕ್ಷ ಡಾ. ವಾಸಪ್ಪ ಗೌಡ ಸ್ವಾಗತಿಸಿ, ಭವ್ಯ ಶೆಟ್ಟಿ ಮತ್ತು ಬಳಗದವರು ಪ್ರಾರ್ಥಿಸಿದರು, ಡಾ ರವಿಚಂದ್ರ ನಾಯ್ಕ ವಂದಿಸಿದರು.

ಸಂಘದ ಉಪಾಧ್ಯಕ್ಷೆ ಡಾ. ರೇಖಾ ಡಿ ಪೈ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಗ್ರಂಥಪಾಲಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬಳಿಕ ಸಂಘದ ವಾರ್ಷಿಕ ಮಹಾಸಭೆಯು ನಡೆಯಿತು. ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡು ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು . ಕೋಶಾಧಿಕಾರಿ ಕವಿತಾ ಲೆಕ್ಕ ಪತ್ರ ಮಂಡಿಸಿದರು.

LEAVE A REPLY

Please enter your comment!
Please enter your name here