ಇಚ್ಲಂಪಾಡಿ: ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

0

ನೆಲ್ಯಾಡಿ: 15 ದಿನದ ಹಿಂದೆ ಆಕಸ್ಮಿಕವಾಗಿ ಮರದಿಂದ ಬಿದ್ದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಚ್ಲಂಪಾಡಿಯ ಕೂಲಿ ಕಾರ್ಮಿಕರೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


ಇಚ್ಲಂಪಾಡಿ ಗ್ರಾಮದ ಮೊಂಟೆತ್ತಡ್ಕ ನಿವಾಸಿ ಸೋಮನಾಥ(47ವ.)ಮೃತಪಟ್ಟವರು. ಇವರು ಆ.7ರಂದು ಇಚ್ಲಂಪಾಡಿ ಗ್ರಾಮದ ಮಾನಡ್ಕ ಎಂಬಲ್ಲಿಗೆ ಕೂಲಿ ಕೆಲಸಕ್ಕೆ ಹೋಗಿದ್ದು, ಮರ ಏರಿ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಕೈ ಜಾರಿ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಇವರನ್ನು ಚಿಕಿತ್ಸೆಗಾಗಿ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಯಲ್ಲಿದ್ದವರು ಚಿಕಿತ್ಸೆ ಫಲಕಾರಿಯಾಗದೇ ಆ.22ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮೃತರ ಪುತ್ರ ಜಯಂತ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಮಾಣಿಗ, ಪುತ್ರ ಜಯಂತ ಹಾಗೂ ಪುತ್ರಿ ಜಯಂತಿ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here