ಮುಂಡೂರು ದೇವಸ್ಥಾನದ ಜಾತ್ರೋತ್ಸವ ವೇಳೆ ಅಧ್ಯಕ್ಷರ ನೇಮಕಾತಿಯ ವಿಚಾರದಲ್ಲಿ ನಡೆದ ಹಲ್ಲೆ, ಬೆದರಿಕೆ ಪ್ರಕರಣದ ಆರೋಪಿಗಳನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದ ನ್ಯಾಯಾಲಯ

0

ಪುತ್ತೂರು : ಎರಡು ವರ್ಷದ ಹಿಂದೆ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ವೇಳೆ ಅಧ್ಯಕ್ಷರ ನೇಮಕಾತಿಯ ವಿಚಾರದಲ್ಲಿ ನಡೆದ ಹಲ್ಲೆ ಮತ್ತು ಬೆದರಿಕೆ ವಿಚಾರದಲ್ಲಿ ದಾಖಲಾದ ಪ್ರಕರಣ ಆರೋಪಿಗಳನ್ನು ನ್ಯಾಯಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.

2021ರ ಫೆ.6 ರಂದು ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ವೇಳೆ ಅಧ್ಯಕ್ಷರ ನೇಮಕಾತಿಯ ವಿಚಾರದಲ್ಲಿ ಅರುಣ್ ಕುಮಾರ್ ಪುತ್ತಿಲ, ಅಶೋಕ್ ಕುಮಾರ್ ಪುತ್ತಿಲ, ಶ್ರೀಕಾಂತ್ ಆಚಾರ್ ಹಿಂದಾರ್ ಅವರು ಹಲ್ಲೆ ನಡೆಸಿದ್ದಾರೆಂದು ಸುರೇಶ್ ಕಣ್ಣರಾಯ ರವರು ದೂರು ನೀಡಿದ್ದು, ನಳಿನೀ ಲೋಕಪ್ಪ ಗೌಡ ಮತ್ತು ಲೋಕಪ್ಪ ಗೌಡ ಮುಖ್ಯ ಸಾಕ್ಷಿದಾರರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ದೋಷಮುಕ್ತರೆಂದು ನ್ಯಾಯಾಲಯ ಆದೇಶ ನೀಡಿದೆ. ಆರೋಪಿಗಳ ಪರ ವಕೀಲರಾದ ದೇವಾನಂದ ಕೆ, ಚಿನ್ಮಯ್ ರೈ ಈಶ್ವರಮಂಗಲ,ಹರಿಣಿ ವಾದಿಸಿದರು.

LEAVE A REPLY

Please enter your comment!
Please enter your name here