ಪುಣ್ಚಪ್ಪಾಡಿ : 35ನೇ ವರ್ಷದ ನೇರೋಳ್ತಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

0

ಸವಣೂರು : ಪುಣ್ಚಪ್ಪಾಡಿ ಗ್ರಾಮದ ನೇರೋಳ್ತಡ್ಕ ವಿನಾಯಕ ನಗರದಲ್ಲಿ ಶ್ರೀ ಗೌರಿ ಗಣೇಶ ಉತ್ಸವ ಸಮಿತಿ ವಿನಾಯಕನಗರ ಇದರ ವತಿಯಿಂದ ನಡೆಯಲಿರುವ 35ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆ ನೇರೋಳ್ತಡ್ಕ ಶ್ರೀ ಗೌರಿಸದನದಲ್ಲಿ ನಡೆಯಿತು.ಸಭೆಯಲ್ಲಿ ಸೆ.10ರಂದು ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿಯ ಸ್ಪರ್ಧೆ ಹಾಗೂ ಮಕ್ಕಳ ಕೃಷ್ಣ ವೇಷ ಸ್ಪರ್ಧೆ ಹಾಗೂ ಸೆ.19ರಂದು ನಡೆಯುವ 35ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಯಶಸ್ವಿ ನಿಟ್ಟಿನಲ್ಲಿ ಚರ್ಚಿಸಲಾಯಿತು. ವೇದಿಕೆಯಲ್ಲಿ ಶ್ರೀ ಗೌರಿ ಗಣೇಶ ಸೇವಾ ಟ್ರಸ್ಟ್‌ ನ ಅಧ್ಯಕ್ಷ ಸಚಿನ್‌ ಕುಮಾರ್‌ ಜೈನ್‌ ಪುಣ್ಚಪ್ಪಾಡಿ ,ಶ್ರೀ ಗೌರಿ ಗಣೇಶ ಉತ್ಸವ ಸಮಿತಿಯ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ,ಅಧ್ಯಕ್ಷ ಮಹೇಶ್‌ ಕೆ.ಸವಣೂರು ,ಉಪಾಧ್ಯಕ್ಷ  ವಸಂತ ಗೌಡ ಬೆದ್ರಂಪಾಡಿ ,ಜತೆ ಕಾರ್ಯದರ್ಶಿ ನಿತಿನ್‌ ಪೂಜಾರಿಮೂಲೆ, ಕೋಶಾಧಿಕಾರಿ ಯತೀಶ್‌ ಕುಮಾರ್‌ ಕೊಂಬಕೆರೆ ಉಪಸ್ಥಿತರಿದ್ದರು.
ಸಭೆಯಲ್ಲಿ ಶ್ರೀ ಗೌರಿ ಗಣೇಶ ಸೇವಾ ಟ್ರಸ್ಟ್‌ , ಶ್ರೀ ಗೌರಿ ಗಣೇಶ ಉತ್ಸವ ಸಮಿತಿಯ ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here