ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಹಿನ್ನೆಲೆ ಶ್ರಮದಾನ

0

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನ ದಲ್ಲಿ 2024ನೇ ಮಾ.20ರಿಂದ ಮಾ.30ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿದೆ.

ಈ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ನಿತ್ಯ ನಿರಂತರವಾಗಿ ಶ್ರಮದಾನ ನಡೆಯುತ್ತಿದೆ. ಇತ್ತೀಚೆಗೆ ಪುತ್ತೂರಿನ ಶ್ರೀ ಮಹಲಿಂಗೇಶ್ವರ ದೇವಸ್ಥಾನದ ಕರಸೇವಕರ ತಂಡದಿಂ ಕ್ಷೇತ್ರದಲ್ಲಿ ಶ್ರಮದಾನ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜನಾರ್ದನ ಎರ್ಕಡಿತ್ತಾಯರವರು ಅವರನ್ನು ಗೌರವಿಸಿದರು.

LEAVE A REPLY

Please enter your comment!
Please enter your name here