ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

0

ನಿಡ್ಪಳ್ಳಿ: ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ 31ನೇ ವರ್ಷದ‌ ಸರ್ವ ಸದಸ್ಯರ ಸಾಮಾನ್ಯ ಸಭೆ ಅ.26 ರಂದು ಸಂಘದ ರಜತಾಮೃತ ಸಭಾಭವನದಲ್ಲಿ ಅಧ್ಯಕ್ಷ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘದ ಉಪಾಧ್ಯಕ್ಷ ಉಮೇಶ್ ಬಲ್ಯಾಯ, ಸಂಘದ ಎಲ್ಲಾ ನಿರ್ದೇಶಕರು, ದ.ಕ ಒಕ್ಕೂಟದ ವಿಸ್ತರಣಾಧಿಕಾರಿ ಮಾಲತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಳೆದ 17 ವರ್ಷ ಸಂಘದಲ್ಲಿ ಸೇವೆ ಸಲ್ಲಿಸಿದ ಸಿಬ್ಬಂದಿ ವಿದ್ಯಾ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗ ಸ್ವಾಗತಿಸಿದರು.ಉಪಾಧ್ಯಕ್ಷ ಉಮೇಶ್ ಬಲ್ಯಾಯ ವಂದಿಸಿದರು.

LEAVE A REPLY

Please enter your comment!
Please enter your name here