ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ 2023-24 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

0

ಪುತ್ತೂರು: ಮಕ್ಕಳ ಶಿಸ್ತು ಬದ್ಧ ನಡವಳಿಕೆಯಲ್ಲಿ ಪೋಷಕರ ಪಾತ್ರ ಹಿರಿದಾದುದು.ತಪ್ಪಾದಾಗ ತಿದ್ದುವ ,ಸೋತಾಗ ಸ್ಪೂರ್ತಿಯಾಗುವ ಆತ್ಮೀಯ ಗೆಳೆಯರು ನಾವಾಗಬೇಕು. ಆಡಳಿತ ಮಂಡಳಿ ,ಶಿಕ್ಷಕ ವರ್ಗದೊಂದಿಗೆ ನಿಕಟ ಸಂಪರ್ಕವನ್ನಿಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು.ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ದೃಷ್ಟಿಯಿಂದ ಸಂಸ್ಥೆಯು ವಿವಿಧ ಕಾರ್‍ಯಕ್ರಮಗಳನ್ನು ಆಯೋಜಿಸುತ್ತಿದೆ.ಈ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಪೋಷಕರ ಸ್ಪಂದನೆ ಅತೀ ಅಗತ್ಯ ಎಂದು ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ (ಬಿ.ಎಡ್.) ಇದರ ಪ್ರಾಂಶುಪಾಲೆ ಶೋಭಿತಾ ಸತೀಶ್ ರವರು ಹೇಳಿದರು.


ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ 2023-24 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯಲ್ಲಿ ಅವರು ಮಾತನಾಡಿದರು.
ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿದ್ದ ಸತ್ಯನಾರಾಯಣ ಇವರು ಹೊಸದಾಗಿ ಚುನಾಯಿತರಾದ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳಿಗೆ ಶುಭ ಹಾರೈಸುತ್ತಾ ಕಳೆದ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ಈಗಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿರಬೇಕು.ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಪೋಷಕರು ತಮ್ಮ ಬೆಂಬಲವನ್ನು , ಸಲಹೆಗಳನ್ನು ಮತ್ತು ಸಹಕಾರವನ್ನೂ ನೀಡುತ್ತಿರಬೇಕುಎಂದು ಹೇಳಿದರು.


ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ ಮಾತನಾಡಿ ,ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣ ಶಿಕ್ಷಕರು ಮತ್ತು ಪೋಷಕರು.ಮಕ್ಕಳಲ್ಲಿ ಸತ್ಭಾವನೆಯನ್ನು ತುಂಬಿ ಒಬ್ಬ ಸತ್ಪ್ರಜೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪೋಷಕರ ಪಾತ್ರ ಮಹತ್ವದ್ದು. ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾದ ಪೋಷಕರ ಪ್ರೋತ್ಸಾಹ ಇನ್ನೂ ಮುಂದೆಯೂ ಇರಲಿ.ಎಂದು ಹೇಳಿದರು.


ಪ್ರಸಕ್ತ ಸಾಲಿನ ರಕ್ಷಕ-ಶಿಕ್ಷಕ ಸಂಘದ ನೂತನ ಅಧ್ಯಕ್ಷರಾದ ಸತೀಶ್ ಕಲ್ಲುರಾಯ ವಿದ್ಯಾರ್ಥಿಗಳ ಅಭಿವೃದ್ಧಿಯ ಬಗ್ಗೆ ಹಾಗೂ ಸಂಸ್ಥೆಯ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನು ಎಲ್ಲಾ ಪೋಷಕರ ಪರವಾಗಿ ಮಾತನಾಡಿ ವ್ಯಕ್ತಪಡಿಸಿದರು.ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗಾಗಿ ತಮ್ಮೆಲ್ಲರ ಸಹಕಾರ ಇರುವುದಾಗಿ ಭರವಸೆ ನೀಡಿದರು.


2023-24 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ರಚನೆ ಪೋಷಕರ ಮತ್ತು ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ನಡೆಯಿತು.ಅಧ್ಯಕ್ಷರಾಗಿ ಸತೀಶ್ ಕಲ್ಲುರಾಯ , ಉಪಾಧ್ಯಕ್ಷರಾಗಿ ತೀರ್ಥಾನಂದ ಗೌಡ ಮತ್ತು ಕಾಂತಿ ಶ್ಯಾಮ್ ,ಹಾಗೆಯೇ ಮಕ್ಕಳ ರಕ್ಷಣಾ ಅಧಿಕಾರಿಯಾಗಿ ಮಧುಶ್ರೀ ಪ್ರಭು ಮತ್ತು ಸದಸ್ಯರಾಗಿ ವಿಜಯ, ವಿಜಯಶ್ರೀ, ಅಶ್ವಿನಿ ಬಿ.ಕೆ., ಶ್ರೀಮತಿ ಗಾಯತ್ರಿ, ರಮಾ ನಾಯ್ಕ್ , ಶಿವಾನಿ ಜಿ., ನಮಿತಾ, ಶಶಿಕಲಾ ಅರ್ತಿಕಜೆ,ಗಣೇಶ್ ಆಚಾರ್, ಅಶ್ವಿನಿ ಪ್ರವೀಣ್,ಜಯರಾಮ ರೈ,ವೀರೇಶ್,ಬಿ. ಯತೀಂದ್ರ,ವಿಶಲಾಕ್ಷಿ ಕೆ.ಪಾಟೀಲ್, ಸುಮತಿ ಕೆ.,ಚಂದ್ರಕಲಾ ಜಿ.,ಜ್ಯೋತಿ ಆರ್.ಭಟ್. ಆಯ್ಕೆಗೊಂಡರು.


ವೇದಿಕೆಯಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಸಂತೋಷ ಬಿ. ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ಪೋಷಕರು ಸಂಸ್ಥೆಯ ಅಭಿವೃದ್ಧಿಗೆ ರಕ್ಷಕ-ಶಿಕ್ಷಕ ಸಂಘದೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.ಸಂಸ್ಥೆಯ ಚಟುವಟಿಕೆಗಳ ಕುರಿತಾದ ಮಾಹಿತಿಯನ್ನು ಪೋಷಕರ ಮುಂದೆ ಇರಿಸಿದರು. ಕಾರ್‍ಯಕ್ರಮದಲ್ಲಿ ಉಪನ್ಯಾಸಕಿಯಾದ ರೇಖಾ ವಂದಿಸಿದರು. ಉಪನ್ಯಾಸಕರಾದ ಕಾರ್‍ಯಕ್ರಮವನ್ನು ಮಮತ ನಿರೂಪಿಸಿದರು.

LEAVE A REPLY

Please enter your comment!
Please enter your name here