ಸನ್ಯಾಸಿಗುಡ್ಡೆ: 2 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

0

ಪುತ್ತೂರು: ಶ್ರೀರಾಮ ಮಂದಿರ ಕೆದಂಬಾಡಿ ಮತ್ತು ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಇವುಗಳ ಜಂಟಿ ಆಶ್ರಯದಲ್ಲಿ ಎರಡನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ ಆ. 25 ರಂದು ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದಲ್ಲಿ ಜರಗಿತು.

ವೇ.ಮೂ. ಕೃಷ್ಣಕುಮಾರ ಉಪಾಧ್ಯಾಯ ಪಟ್ಲಮೂಲೆ ಯವರ ಪೌರೋಹಿತ್ಯದಲ್ಲಿ ಪೂಜಾ ವಿಧಿವಿಧಾನಗಳು ನಡೆದು ಮಧ್ಯಾಹ್ನ‌ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು. ಶ್ರೀರಾಮ ಮಂದಿರದ ಪದಾಧಿಕಾರಿಗಳು, ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿಯ ಅಧ್ಯಕ್ಷೆ ಸೀಮಾ ಪ್ರಭಾಕರ ರೈ ಮುಂಡಾಳಗುತ್ತು, ಕಾರ್ಯದರ್ಶಿ ವಾಣಿಶ್ರೀ ಕೃಷ್ಣಕುಮಾರ್‌ ಇದ್ಯಪೆ, ಕೋಶಾಧಿಕಾರಿ ಅಮಿತ ಬಾಬು ಕೋರಂಗ ಸೇರಿದಂತೆ ನೂರಾರು ಭಕ್ತಾಭಿಮಾನಿಗಳು ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here