ನಾಳೆ ಅಳಿಕೆ ವ್ಯವಸಾಯ ಸೇವಾ ಸಹಕಾರ ಸಂಘದ ಶತಮಾನೋತ್ಸವದ ನೂತನ ಕಟ್ಟಡ ‘ಶತಸಮೃದ್ಧಿ’ ಉದ್ಘಾಟನೆ

0

ವಿಟ್ಲ: ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಸತ್ಯಸಾಯಿ ವಿಹಾರದಲ್ಲಿರುವ ಅಳಿಕೆ ವ್ಯವಸಾಯ ಸೇವಾ ಸಹಕಾರ ಸಂಘದ ಶತಮಾನೋತ್ಸವದ ನೂತನ ಕಟ್ಟಡ ಶತಸಮೃದ್ಧಿಯ ಉದ್ಘಾಟನಾ ಸಮಾರಂಭ ಆ.28ರಂದು ಬೆಳಗ್ಗೆ ನಡೆಯಲಿದೆ.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರು ನೂತನ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದಾರೆ. ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೆ.ಎಸ್.ಕೃಷ್ಣ ಭಟ್ ರವರು ದೀಪಬೆಳಗಿಸಲಿದ್ದಾರೆ, ಸಂಸದ ನಳಿನ್ ಕುಮಾರ್ ಕಟೀಲುರವರು ಸಂಸ್ಥೆಯ ಗೋದಾಮನ್ನು ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈರವರು ದಿ|ಮಡಿಯಾಲ ನಾರಾಯಣ ಭಟ್ ಸ್ಮಾರಕ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತುರವರು ಭದ್ರತಾ ಕೋಶವನ್ನು ಉದ್ಘಾಟಿಸಲಿದ್ದಾರೆ. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರುರವರು ಗಣಕೀಕರಣ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬ್ಯಾಂಕ್ ನ ನಿರ್ದೇಶಕರಾದ ಟಿ.ಜಿ. ರಾಜಾರಾಮ ಭಟ್ ರವರು ಆಡಳಿತ ಮಂಡಳಿಯ ಸಭಾಂಗಣವನ್ನು ಉದ್ಘಾಟಿಸಲಿದ್ದಾರೆ. ಉಳಿದಂತೆ ವಿವಿಧ ಕ್ಷೇತ್ರದ ಸಾಧಕರು ಗಣ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಹಕಾರ ಸಂಘದ ಅಧ್ಯಕ್ಷರಾದ ಕಾನ ಈಶ್ವರ ಭಟ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here