ರಾಷ್ಟಮಟ್ಟದ ಕರಾಟೆ ಪಂದ್ಯಾಟಕ್ಕೆ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಆಯ್ಕೆ

0

ಪುತ್ತೂರು: ಪುಣಚದ ಶ್ರೀದೇವಿ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಅಕ್ಟೋಬರ್ 28 ರಿಂದ 30 ವರೆಗೆ ಮಧ್ಯಪ್ರದೇಶದ ದೇವಾಸ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದೆ. ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರಣವ್ ಎ, ಚೇತನ್, ವಿನೀಶ್ ಕುಮಾರ್, ವಾಣಿಜ್ಯ ವಿಭಾಗದ ಪವನ್, ಕಲಾ ವಿಭಾಗದ ಅರುಣ್ ಕುಮಾರ್, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅದ್ವಿತ್ ಶರ್ಮ, ಶಮಂತ್ ಬಿ. ಎಲ್, ಅಶೀಶ್ ಕೆ, ದುರ್ಗೇಶ್, ವಾಣಿಜ್ಯ ವಿಭಾಗದ ಲಿಖಿತ್ ಭಾಗವಹಿಸಿದ್ದರು.

ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸಹನಾ ಭಟ್, ವಾಣಿಜ್ಯ ವಿಭಾಗದ ಪ್ರಪ್ತಿ ಕೆ. ಎಸ್, ಪುಣ್ಯ ಆರ್ ಎನ್, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪ್ರಣಮ್ಯ ಪಿ ರಾವ್, ಕಲಾ ವಿಭಾಗದ ತೃಪ್ತಿ ಎ ಕೆ ಭಾಗವಹಿಸಿದ್ದರು. ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here