ನೆಲ್ಯಾಡಿ: ಬೈಕ್ , ಕಾರು ಡಿಕ್ಕಿ – ಬೈಕ್ ಸವಾರನಿಗೆ ಗಾಯ

0

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಆ.28ರಂದು ಬೆಳಗ್ಗೆ ಆಲ್ಟೊ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಬೈಕ್ ಸವಾರ , ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಎಂಬವರು ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ನೆಲ್ಯಾಡಿ ಯಿಂದ ಮಂಗಳೂರಿಗೆ ತೆರಳುತ್ತಿರುವ ಆಲ್ಟೊ ಕಾರು ಹಾಗೂ ಪೆಟ್ರೋಲ್ ಬಂಕ್ ನಿಂದ ಪೆಟ್ರೋಲ್ ಅನ್ನು ತುಂಬಿಸಿಕೊಂಡು ಬರುತ್ತಿದ್ದ ಬೈಕಿನ ಮಧ್ಯೆ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here