ಬಿಲ್ಲವ ಯುವ ಸಮಾಜ ವತಿಯಿಂದ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

0

ಪುತ್ತೂರು: ಬಿಲ್ಲವ ಯುವ ಸಮಾಜ ಪುತ್ತೂರು ಇದರ ವತಿಯಿಂದ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಶಾಸಕರ ನೂತನ ಕಚೇರಿ ಶುಭಾರಂಭ ಕಾರ್ಯಕ್ರಮದ ಬಳಿಕ ಯುವ ವೇದಿಕೆಯ ವತಿಯಿಂದ ಶಾಸಕರ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಕ್ಷೇತ್ರದ ಅಭಿವೃದ್ದಿಗೆ ಇನ್ನಷ್ಟು ಒತ್ತು ನೀಡುವ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಡವರ ಕೆಲಸಗಳು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಕೆಲಸ ನಿಮ್ಮಿಂದಾಗಲಿ ಎಂದು ಬಿಲ್ಲವ ಯುವ ಸಮಾಜದ ಮುಖಂಡರು ಶಾಸಕರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಕಿರಣ್‌ ಬಸಂತಕೋಡಿ, ದಿನೇಶ್ ಕರ್ಕೆರಾ ಕೋಲಾಡಿ, ಚಂಧ್ರಶೇಖರ್ ಕಲ್ಲಗುಡ್ಡೆ, ಚಂದ್ರಕಲಾ ಮುಕ್ವೆ, ಮೋಹನ್ ಗುರ್ಜಿನಡ್ಕ, ಕೇಶವ ಅರ್ಕ, ಮೋಹನ್ ಪೂಜಾರಿ ಪುಣಚ, ಅಶೋಕ್ ಪೂಜಾರಿ ಬೊಳ್ಳಾಡಿ, ಕೃಷ್ಣಪ್ಪ ಕಲಾವಿದ, ಎಲ್ಯಣ್ಣ ಪೂಜಾರಿ ಮಿರುಂಡ, ನಾರಾಯಣ ಪೂಜಾರಿ ಬದಿಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು. ನೆನಪಿನ ಕಾಣಿಕೆಯಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿದರು.

LEAVE A REPLY

Please enter your comment!
Please enter your name here