ಕಡಬ: ಜಿಲ್ಲಾ ಮಟ್ಟದ ಗಣಿತ ವಿಜ್ಞಾನ ಹಾಗೂ ಸಂಸ್ಕೃತಿ ಮಹೋತ್ಸವದಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

0

ಕಡಬ: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲದಲ್ಲಿ ಆ.26ರಂದು ನಡೆದ ಜಿಲ್ಲಾ ಮಟ್ಟದ ಗಣಿತ ವಿಜ್ಞಾನ ಹಾಗೂ ಸಂಸ್ಕೃತಿ ಮಹೋತ್ಸವದಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. ಗಣಿತ ಮಾದರಿ ಪ್ರದರ್ಶನದಲ್ಲಿ ಚೇತನ್ ಕೆ 10ನೇ ತರಗತಿ ದ್ವಿತೀಯ ಸ್ಥಾನ, ರಕ್ಷಾ ಕೆ ಬಿ(1೦ನೇ), ಮಧುರಾ ರೈ ಬಿ ಹಾಗೂ 9ನೇ ತರಗತಿಯ ಯಶ್ವಿತಾ ಇವರು ವೇದಗಣಿತ ರಸಪ್ರಶ್ನೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ ಗಣಿತ ಶಿಕ್ಷಕಿ ರಕ್ಷಿತಾ ರೈ ಎಸ್ ಮಾರ್ಗದರ್ಶನ ನೀಡಿರುತ್ತಾರೆ. ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಧ್ಯಾನ್ ಯಂ 10ನೇ ತರಗತಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಶಿಕ್ಷಕಿ ಜಲಜಾಕ್ಷಿ ಬಿ ವಿ ಮಾರ್ಗದರ್ಶನ ನೀಡಿರುತ್ತಾರೆ.

LEAVE A REPLY

Please enter your comment!
Please enter your name here