ಪ್ರಾಥಮಿಕ ಬಾಲಕರ, ಬಾಲಕಿಯರ ಕಬಡ್ಡಿ ಪಂದ್ಯಾಟ- ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ತಾಲೂಕು ಮಟ್ಟಕ್ಕೆ ಆಯ್ಕೆ

0

ಕಾಣಿಯೂರು: ವೀರ ಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.


ಪ್ರಾಥಮಿಕ ಬಾಲಕರ ವಿಭಾಗದಲ್ಲಿ ವಿಕಾಸ್, ನಿಶಾಂತ್ ಕೆ ಜಿ, ಭವಿಷ್ ಡಿ, ಚಿಂತನ್ ಡಿ, ಹರ್ಷ ಪಿ ವಿ, ಕುಮಾರ ಸುಬ್ರಹ್ಮಣ್ಯ ,ಮದನ್ ಕುಮಾರ್ ,ರೈಹಾನ್ ,ಸ್ವಸ್ತಿಕ್ ಪ್ರನ್ವಿತ್, ವರುಣ್, ಸಾಧನ್ ಎಮ್ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.


ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಭವಿಷ್ಯ ರೈ, ಸಾನ್ವಿ ಎಂ ಸಿ, ಕುಷ್ಯ ಡಿ ಗೌಡ, ಮಾನ್ಯ, ಯಜ್ಞಾ ಡಿ, ಎಂ ಮಂಗಳ, ಪ್ರಣವಿ ಪಿ ಆರ್, ತೃಷಾ ಇವರು ದ್ವಿತೀಯ ಸ್ಥಾನವನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ , ಶಾಲಾ ಮುಖ್ಯಗುರು ಸರಸ್ವತಿ ಎಂ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು.


ಇವರಿಗೆ ಶಾಲಾ ಟ್ರಸ್ಟಿ ಆಗಿರುವ ಶ್ರೀ ಹರಿಚರಣ್ ರೈ ಮಾದೋಡಿಯವರು ತರಬೇತಿ ನೀಡಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಜಯಚಂದ್ರ ಮತ್ತು ವನಿತಾ ಸಹಕರಿಸಿದರು.

LEAVE A REPLY

Please enter your comment!
Please enter your name here