ಕಬಕ ಪ.ಪೂ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ವಿಜೇತಾ ವಿ ಬಿ ಯವರ ಬೀಳ್ಕೊಡುಗೆ ಸಮಾರಂಭ

0

ಕಬಕ: ಇಲ್ಲಿನ ಸ.ಪ.ಪೂ.ಕಾಲೇಜಿನಲ್ಲಿ ಕಳೆದ 10 ವರ್ಷಗಳಿಂದ ರಸಾಯನಶಾಸ್ತ್ರ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜೇತಾ ವಿ ಬಿ ಮೈಸೂರಿನ ಹುಣಸೂರು ಬಾಲಕರ ಸ.ಪ.ಪೂ.ಕಾಲೇಜಿಗೆ ವರ್ಗಾವಣೆಗೊಂಡಿದ್ದಾರೆ.

ಆ ಪ್ರಯುಕ್ತ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಆ.28ರಂದು ಏರ್ಪಡಿಸಲಾಯಿತು.ಈ ಸಂದರ್ಭದಲ್ಲಿ ಶಾಲು, ಸ್ಮರಣಿಕೆ, ಫಲಪುಷ್ಪ, ಹಾರ ಹಾಕಿ ಸನ್ಮಾನಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಶ್ರೀಧರ ರೈ ಕೆ ವಹಿಸಿದ್ದರು. ಕಾಲೇಜು ಅಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷ ಶಾಬಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಸಂಸ್ಥೆಯ ಉಪನ್ಯಾಸಕರು ,ವಿದ್ಯಾರ್ಥಿಗಳು ಅನಿಸಿಕೆಯನ್ನು ವ್ಯಕ್ತಪಡಿಸಿದರು.ಸ್ವಾತಿ ಸ್ವಾಗತಿಸಿ,ಕವನರವರು ವಿಜೇತಾರನ್ನು ಪರಿಚಯಿಸಿ,ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿ,ಅಶ್ವಿತಾ ವಂದಿಸಿದರು.

LEAVE A REPLY

Please enter your comment!
Please enter your name here