ತಾ| ಯುವ ಬಂಟರ ಸಂಘದಿಂದ ಸೀತಾರಾಮ ಶೆಟ್ಟಿ ಕಂಬಳದಡ್ಡರವರಿಗೆ ಶ್ರದ್ಧಾಂಜಲಿ

0

ಪುತ್ತೂರು: ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಸಂಘದ ಮಾಜಿ ಅಧ್ಯಕ್ಷ ಸೀತಾರಾಮ ಶೆಟ್ಟಿ ಕಂಬಳದಡ್ಡರವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್‍ಯಕ್ರಮ ಆ. 29 ರಂದು ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು.

ಸೀತಾರಾಮ ಶೆಟ್ಟಿ ಯುವ ಬಂಟರ ಸಂಘದ ಸ್ಪೂರ್ತಿ- ಶಶಿರಾಜ್ ರೈ:
ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ ಮುಂಡಾಳಗುತ್ತುರವರು ಮಾತನಾಡಿ ೨೦೧೬ ರಲ್ಲಿ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದ ಸೀತಾರಾಮ ಶೆಟ್ಟಿಯವರು ಸರಳ, ಸಜ್ಜನಿಕೆಯ ವ್ಯಕ್ತಿಯಾಗಿ ಯುವ ಬಂಟರ ಸಂಘಕ್ಕೆ ಸ್ಪೂರ್ತಿಯಾಗಿದ್ದರು. ಅವರ ಅಕಾಲಿಕ ಅಗಲುವಿಕೆ ತುಂಬಾ ನೋವು ತಂದಿದೆ ಎಂದರು.

ಸಮಾಜದ ಪ್ರೀತಿಯ ವ್ಯಕ್ತಿ- ಹೇಮನಾಥ ಶೆಟ್ಟಿ:
ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರು ಮಾತನಾಡಿ ಸೀತಾರಾಮ ಶೆಟ್ಟಿರವರು ಸಮಾಜ ಮತ್ತು ಕುಟುಂಬದಲ್ಲಿ ಎಲ್ಲರ ಪ್ರೀತಿಯ ವ್ಯಕ್ತಿಯಾಗಿದ್ದರು. ಉತ್ತಮ ಆಚಾರ-ವಿಚಾರವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದರು ಎಂದು ಹೇಳಿದರು.

ಆದರ್ಶ ಜೀವನ- ಕುಂಬ್ರ ದುರ್ಗಾಪ್ರಸಾದ್ ರೈ:
ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶಕ ಕುಂಬ್ರ ದುರ್ಗಾಪ್ರಸಾದ್ ರೈಯವರು ಮಾತನಾಡಿ ಎಲ್ಲರನ್ನು ಗೌರವದಿಂದ ಕಾಣುವ ಸೀತಾರಾಮ ಶೆಟ್ಟಿಯವರ ಆದರ್ಶ ಜೀವನ ಮಾದರಿಯಾಗಿದೆ ಎಂದರು.

ಪ್ರಾಮಾಣಿಕತೆಯ ಜೀವನ- ಬೂಡಿಯಾರ್ ರಾಧಾಕೃಷ್ಣ ರೈ:
ಬಂಟರ ಸಂಘದ ನಿಕಟಪೂರ್ವಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈಯವರು ಮಾತನಾಡಿ ಸೀತಾರಾಮ ಶೆಟ್ಟಿಯವರು ತಮ್ಮ ಬದುಕಿನಲ್ಲಿ ನಿಷ್ಠೆ ಪ್ರಾಮಾಣಿಕತೆಯಿಂದ ಜೀವನ ನಡೆಸಿಕೊಂಡು ಬರುತ್ತಿದ್ದರು ಎಂದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಪುತ್ತೂರು ತಾಲೂಕು ಬಂಟರ ಸಂಘದ ಪ್ರಧಾನ ಕಾರ್‍ಯದರ್ಶಿ ರಮೇಶ್ ರೈ ಡಿಂಬ್ರಿ, ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ ಉಪ್ಪಳಿಗೆ, ತಾಲೂಕು ಯುವ ಬಂಟರ ಸಂಘದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ತಾಲೂಕು ಮಹಿಳಾ ಬಂಟರ ಸಂಘದ ಪ್ರಧಾನ ಕಾರ್‍ಯದರ್ಶಿ ಹರಿಣಾಕ್ಷಿ ಜೆ.ಶೆಟ್ಟಿರವರುಗಳು ಸಂದರ್ಭೋಚಿತವಾಗಿ ಮಾತನಾಡಿ ನುಡಿನಮನ ಸಲ್ಲಿಸಿದರು. ಬಂಟರ ಸಂಘ, ಮಹಿಳಾ ಬಂಟರ ಸಂಘ, ಯುವ ಬಂಟರ ಹಾಗೂ ವಿದ್ಯಾರ್ಥಿ ಬಂಟರ ಸಂಘದ ನಿರ್ದೇಶಕರು, ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು. ಯುವ ಬಂಟರ ಸಂಘದ ಸಂಚಾಲಕ ನವೀನ್ ರೈ ಪಂಜಳ ಕಾರ್‍ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here