ಬಡಗನ್ನೂರು ಗ್ರಾ.ಪಂ.ವತಿಯಿಂದ ಕರ್ನಾಟಕ ಸರಕಾರ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ

0

ಬಡಗನ್ನೂರುಃ ಬಡಗನ್ನೂರು ಗ್ರಾ.ಪಂ.ವತಿಯಿಂದ ಕರ್ನಾಟಕ ಸರಕಾರ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ರಂಗೋಲಿ ಬಿಡಿಸಿ ಮೆರಗುತುಂಬಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ಎಂ, ಉಪಾಧ್ಯಕ್ಷೆ ಸುಶೀಲ ಪಕ್ಯೋಡ್, ಸದಸ್ಯರಾದ ಸಂತೋಷ್ ಆಳ್ವ, ರವಿರಾಜ ರೈ ಸಜಂಕಾಡಿ, ಲಿಂಗಪ್ಪ ಗೌಡ ಮೋಡಿಕೆ, ವಸಂತ ಗೌಡ ಕನ್ನಯ, ರವಿಚಂದ್ರ ಸಾರೆಪ್ಪಾಡಿ, ಕುಮಾರ ಅಂಬಟೆಮುಲೆ, ವೆಂಕಟೇಶ ಕನ್ನಡ್ಕ, ಧರ್ಮೇಂದ್ರ ಕುಲಾಲ್ ಪದಡ್ಕ, ಹೇಮಾವತಿ ಮೋಡಿಕೆ, ಸುಜಾತ ಮೈಂದನಡ್ಕ, ಸವಿತಾ ನೇರೋತ್ತಡ್ಕ, ದಮಯಂತಿ ಕೆಮನಡ್ಕ, ಜ್ಯೋತಿ ಅಂಬಟೆಮೂಲೆ, ಕಲಾವತಿ ಗೌಡ ಪಟ್ಲಡ್ಕ  ಹಾಗೂ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು  ಉಪಸ್ಥಿತರಿದ್ದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಸೀಮ ಗಂಧದ ಕಾರ್ಯಕ್ರಮ ನಿರೂಪಣೆ ಮಾಡಿದರು ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here