ಪ್ರಿಯದರ್ಶಿನಿ ವಿದ್ಯಾಸಂಸ್ಥೆಯಲ್ಲಿ ಗೋಕುಲಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

0

ಬೆಟ್ಟಂಪಾಡಿ: ಇಲ್ಲಿನ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯಲ್ಲಿ  ಸೆ. 9ರಂದು ನಡೆಯುವ 6ನೇ ವರ್ಷದ ಗೋಕುಲಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ. 30ರಂದು ನಡೆಯಿತು. ಪಿಡಬ್ಲ್ಯೂಡಿ ಕಾಂಟ್ರಾಕ್ಟರ್ ನವೀನ್ ತಲಪಾಡಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಗೋಕುಲಾಷ್ಟಮಿ ಸಮಿತಿಯ ಅಧ್ಯಕ್ಷ ಡಾ. ಪ್ರಮೋದ್ ಎಂ.ಜಿ., ಆಡಳಿತ ಮಂಡಳಿಯ ಸದಸ್ಯೆ ದೀಪಿಕಾ ಪ್ರಕಾಶ್ ರೈ ಬೈಲಾಡಿ, ಶಿಕ್ಷಕ-ರಕ್ಷಕ ಸಂಘದ ಮಾಜಿ ಅಧ್ಯಕ್ಷ ಶುಭಕರ ರೈ ಬೈಲಾಡಿ ಹಾಗೂ ಸಂಘದ ಸದಸ್ಯರು ಮತ್ತು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಮುಖ್ಯಗುರು ರಾಜೇಶ್ ಎನ್. ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here