ಅಕ್ಷಯ ಕಾಲೇಜಿನಲ್ಲಿ ಓಣಂ ಆಚರಣೆ

0

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ IQAC ಮತ್ತು ಸಾಂಸ್ಕೃತಿಕ ಸಂಘದ ಜಂಟಿ ಆಶ್ರಯದಲ್ಲಿ ಓಣಂ ‘ಶ್ರಾವಣೋತ್ಸವ’ ಹಬ್ಬವನ್ನು ಆಚರಿಸಲಾಯಿತು.

ಪೋಟೋ: ನವೀನ್ ಪಂಜಳ


ಕಾರ್ಯಕ್ರಮವನ್ನು ದೀಪಪ್ರಜ್ವಲನೆಯ ಮೂಲಕ ಉಧಾಟಿಸಿದ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷ ಗೋಕುಲ್‌ನಾಥ್ ಪಿ.ವಿ. ಎಲ್ಲಾ ಹಬ್ಬಗಳನ್ನು ವಿದ್ಯಾಸಂಸ್ಥೆಯಲ್ಲಿ ಆಚರಿಸಿ ಸೌಹಾರ್ದತೆಯ ಸಂದೇಶವನ್ನು ಸಾರಬಹುದೆಂದು ಹೇಳಿದರು. ವೃತ್ತಿಪರ ಕೋರ್ಸ್‌ಗಳ ಕನಸುಗಳನ್ನು ಹೊತ್ತ ವಿದ್ಯಾರ್ಥಿಗಳಿಗೆ ಈ ಸಂಸ್ಥೆ ಆಶಾಕಿರಣವಾಗಿದೆ ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ವಹಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಜಯಕುಮಾರ್ ಆರ್ ನಾಯಕ್, ಕಾಲೇಜಿನ ಆಡಳಿತ ನಿದೇಶಕಿ ಕಲಾವತಿ ನಡುಬೈಲು, ಪ್ರಾಂಶುಪಾಲ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಉಪಸ್ಥಿತರಿದ್ದರು.


ವಿದ್ಯಾರ್ಥಿ ಪ್ರಕೃತಿ ಪ್ರಾರ್ಥಿಸಿ, ಉಪನ್ಯಾಸಕಿ ರಶ್ಮಿ ಕೆ ಸ್ವಾಗತಿಸಿ, ಉಪನ್ಯಾಸಕ ರೋಶನ್ ಅಂಟೋನಿ ವಂದಿಸಿದರು. ಉಪನ್ಯಾಸಕ ರಾಕೇಶ್ ಕುಲದಪಾರೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here