ನಾಳೆ(ಸೆ.2) ಪುತ್ತೂರಿನಲ್ಲಿ ಎಸ್.ವೈ.ಎಸ್ ದ.ಕ ಈಸ್ಟ್ ಅಲ್ ಅರ್ಖಮಿಯ್ಯ ಪ್ರತಿನಿಧಿ ಸಮಾವೇಶ  

0

-ಸಂಜೆ ಎಸ್ಸೆಸ್ಸೆಫ್ ಬೃಹತ್ ಗೋಲ್ಡನ್ ರ‍್ಯಾಲಿ

ಪುತ್ತೂರು: ಎಸ್ ವೈ ಎಸ್ ದ.ಕ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಅಲ್ ಅರ್ಖಮಿಯ್ಯ ಯೂತ್ ಸ್ಕ್ವೇರ್  ಜಿಲ್ಲಾ ಪ್ರತಿನಿಧಿ ಸಮಾವೇಶ ಸೆ.2ರಂದು ಪುತ್ತೂರು ಟೌನ್ ಹಾಲ್‌ನಲ್ಲಿ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ನಡೆಯಲಿದೆ.

ಕೇರಳ ಹಾಗೂ ಕರ್ನಾಟಕದ  ವಿದ್ವಾಂಸರು, ದಾರ್ಶನಿಕರು, ಸಾಹಿತಿಗಳು ಹಾಗೂ ಚಿಂತಕರಿಂದ ಆಧ್ಯಾತ್ಮಿಕತೆ, ಆದರ್ಶ, ಆರೋಗ್ಯ, ಸಂಘಟನೆ, ಸಾಹಿತ್ಯ ಮುಂತಾದ ವಿವಿಧ ವಿಷಯಗಳಲ್ಲಿ ತರಗತಿಗಳು ನಡೆಯಲಿದೆ. ಕರ್ನಾಟಕ ಎಸ್ ವೈ ಎಸ್ ತನ್ನ ಮೂವತ್ತನೇ ವಾರ್ಷಿಕ ಆಚರಿಸುವ ಅಂಗವಾಗಿ ಬೆಳಗ್ಗೆ 8 ಗಂಟೆಗೆ ಪುತ್ತೂರು ಕಿಲ್ಲೆ ಮೈದಾನದಲ್ಲಿ ಮೂವತ್ತು ಧ್ವಜಸ್ಥಂಭಗಳಲ್ಲಿ ಧ್ವಜಾರೋಹಣ ನಡೆಯಲಿದೆ.  9 ಗಂಟೆಗೆ ಖಾಝಿ ಖುರ್ರತುಸ್ಸಾದಾತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್, ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ‌ರವರ ನೇತೃತ್ವದಲ್ಲಿ ಜಿಲ್ಲಾ ಪ್ರತಿನಿಧಿ ಸಮಾವೇಶದ ಉದ್ಘಾಟನಾ ಸಮಾರಂಭ ನಡೆಯಲಿದೆ. ನಂತರ ವಿವಿಧ ವಿಷಯಗಳಲ್ಲಿ ತರಗತಿ ನಡೆಯಲಿದೆ. ವಿದ್ವಾಂಸ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ, ತ್ವಾಹಿರ್ ಸಖಾಫಿ ಮಂಜೇರಿ, ಡಾ.ಸಯ್ಯಿದ್ ಸೈಫುಲ್ಲಾ ಮರ್ಕಝ್ ನಾಲೆಡ್ಜ್ ಸಿಟಿ, ಮರ್ಝೂಕ್ ಸ‌ಅದಿ ಕಾರಂದೂರು ಮರ್ಕಝ್, ಡಾ.ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಹಾಫಿಲ್ ಸುಫ್ಯಾನ್ ಸಖಾಫಿ, ಎಕೆ ಸರ್ ನಂದಾವರ ವಿವಿಧ ವಿಷಯಗಳಲ್ಲಿ ತರಗತಿ ನಡೆಸಿಕೊಡಲಿದ್ದಾರೆ. ಜಿ.ಎಂ ಮುಹಮ್ಮದ್ ಕಾಮಿಲ್ ಸಖಾಫಿ, ಹಫೀಳ್ ಸ‌ಅದಿ ಕೊಡಗು,ಕೆ ಎಂ ಅಬೂಬಕರ್ ಸಿದ್ದೀಕ್ ಮೊಂಟುಗೋಳಿ,ಎಂ ಬಿ ಎಂ. ಸಾದಿಕ್ ಮಾಸ್ಟರ್,ಅಡ್ವಕೇಟ್ ಹಂಝತ್,ಎಫ್ ಎಚ್ ಮುಹಮ್ಮದ್ ಮಿಸ್ಬಾಹಿ ಮುಂತಾದ ಉಲಮಾ ಉಮರಾ ನೇತಾರರು, ಪುತ್ತೂರು ಶಾಸಕರಾದ ಅಶೋಕ್ ರೈ, ಎಂ ಬಿ ವಿಶ್ವನಾಥ ರೈ, ಶಕೂರ್ ಹಾಜಿ ಪಡೀಲ್, ಮುಂತಾದ ರಾಜಕೀಯ ಸಾಮಾಜಿಕ ನೇತಾರರು ಭಾಗವಹಿಸಲಿದ್ದಾರೆ.

ಎಸ್ ವೈ ಎಸ್ ಈಸ್ಟ್ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಮಿಸ್ಬಾಹಿ  ತ್ವೈಬಾ, ಸ್ವಾಗತ ಸಮಿತಿ ಚೇರ್ಮನ್ ಅಬ್ದುಲ್ ಕರೀಮ್ ಹಾಜಿ ಚೆನ್ನಾರ್ ಹಾಗೂ ಸ್ವಾಗತ ಸಮಿತಿ ಕನ್ವೀನರ್ ಇಕ್ಬಾಲ್ ಬಪ್ಪಳಿಗೆ ತಿಳಿಸಿದ್ದಾರೆ.

ಸಂಜೆ ಎಸ್ಸೆಸ್ಸೆಫ್ ಗೋಲ್ಡನ್ ರ‍್ಯಾಲಿ:
ಸಂಜೆ 4 ಗಂಟೆಗೆ ಸುನ್ನೀ ಸಂಘ ಕುಟುಂಬದ ವತಿಯಿಂದ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ಪ್ರಚಾರಾರ್ಥ ಕಿಲ್ಲೆ ಮೈದಾನದಿಂದ ದರ್ಬೆ ವೃತ್ತದ ವರೆಗೆ ಬೃಹತ್ ಗೋಲ್ಡನ್ ರ‍್ಯಾಲಿ ನಡೆಯಲಿದೆ. ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here