ಚಿಕ್ಕಮುಡ್ನೂರು, ಶಾಂತಿಗೋಡು ಸಂಪರ್ಕ ರಸ್ತೆ ದುರಸ್ಥಿಗೆ ಸಂಸದರಿಗೆ ಮನವಿ

0

ಪುತ್ತೂರು: ಚಿಕ್ಕಮುಡ್ನೂರು ಮತ್ತು ಶಾಂತಿಗೋಡು ಗ್ರಾಮದ ಕೆಮ್ಮಾಯಿ-ಬೀರ‍್ನಹಿತ್ಲು-ಆನಡ್ಕ ಸಂಪರ್ಕ ರಸ್ತೆಗೆ ಸಂಬಂಧಿಸಿ ರಸ್ತೆ ದುರಸ್ಥಿ ಮಾಡುವಂತೆ ಬನ್ನೂರು ಗ್ರಾ.ಪಂ ಪಂಚಾಯತ್‌ನಿಂದ ಸಂಸದರಿಗೆ ಮನವಿ ಮಾಡಲಾಗಿದೆ.

ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿಯಿಂದ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ 11 ಕಿ.ಮೀ ಉದ್ದದ ರಸ್ತೆಯಿದೆ. ಈ ರಸ್ತೆಗೆ ತಾರಕರೆ ಎಂಬಲ್ಲಿ ಸೇತುವೆ ನಿರ್ಮಾಣವಾಗಿದ್ದರೂ ಅಲ್ಲಿಗೆ ರಸ್ತೆ ಸಂಪರ್ಕವಿಲ್ಲದೆ ಸೇತುವೆ ಉಪಯೋಗಕ್ಕಿಲ್ಲದಂತಾಗಿದೆ. ಈ ನಿಟ್ಟಿನಲ್ಲಿ ರಸ್ತೆಯನ್ನು ಸಡಕ್ ಯೋಜನೆಯಲ್ಲಿ ಅಭಿವೃದ್ಧಿ ಪಡಿಸಿ ಸೇತುವೆಗೆ ಸಂಪರ್ಕ ಒದಗಿಸುವಂತೆ ಮನವಿ ಮಾಡಲಾಗಿದೆ.

LEAVE A REPLY

Please enter your comment!
Please enter your name here