ನೇಲ್ಯಡ್ಕ ಅಂಗನವಾಡಿ ಕಾರ್ಯಕರ್ತೆ ಶಾಂತಿರವರಿಗೆ ಬೀಳ್ಕೊಡುಗೆ – ಆರ್ಯಾಪು ಗ್ರಾ.ಪಂ. ನೂತನ ಅಧ್ಯಕ್ಷೆ, ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

0

ಪುತ್ತೂರು: ಆರ್ಯಾಪು ಗ್ರಾಮದ ನೇಲ್ಯಡ್ಕ ಅಂಗನವಾಡಿ ಕೇಂದ್ರದಿಂದ ಶಾಂತಿಗೋಡು ಗ್ರಾಮದ ಪೇರಡ್ಕ ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆಗೊಂಡ ಶಾಂತಿ ಕೆ. ರವರಿಗೆ ಬೀಳ್ಕೊಡುಗೆ ಹಾಗೂ ಆರ್ಯಾಪು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾದ ಗೀತಾ ಮತ್ತು ಸದಸ್ಯರಾದ ಸುಬ್ರಹ್ಮಣ್ಯ ಬಲ್ಯಾಯ ರವರಿಗೆ ಅಭಿನಂದನಾ ಕಾರ್ಯಕ್ರಮವು ದೇವಸ್ಯ ಶ್ರೀ ಮಂಜುನಾಥ ಸಭಾಭವನದಲ್ಲಿ ನಡೆಯಿತು.

ಬಾಲವಿಕಾಸ ಸಮಿತಿ, ಅಂಗನವಾಡಿ ಕಾರ್ಯಕರ್ತೆಯರಾದ ಕುಸುಮ, ಸಾವಿತ್ರಿ.ಕೆ, ವೇದಾವತಿ, ಆಶಾಕಾರ್ಯ ಕರ್ತೆಯಾರಾದ ಶಾಂತಿ, ಗುಲಾಬಿ, ಮಹಾಲಕ್ಷ್ಮಿ ಮತ್ತು ರಕ್ತೇಶ್ವರಿ, ಸ್ತ್ರೀ ಶಕ್ತಿ ಗುಂಪಿನ ಸದಸ್ಯರು, ಮಕ್ಕಳ ಪೋಷಕರು ಶಾಂತಿಯವರಿಗೆ ನೆನಪಿನಕಾಣಿಕೆ ಕೊಟ್ಟು ಗೌರವಿಸಿದರು. ಕಾರ್ಯಕ್ರಮದಲ್ಲಿ ಆರ್ಯಾಪು ಗ್ರಾಮಪಂಚಾಯತ್ ಅಧ್ಯಕ್ಷೆ ಗೀತಾ, ಸದಸ್ಯರಾದ ಸುಬ್ರಹ್ಮಣ್ಯ ಬಲ್ಯಾಯ, ವಸಂತ, ಶ್ರೀ ದುರ್ಗಾ, ಶ್ರೀನಿವಾಸ್ ರೈ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸುಜಾತ, ಬಾಲವಿಕಾಸ ಸಮಿತಿ ಅಧ್ಯಕ್ಷೆ ವಸಂತಿ ಉಪಸ್ಥಿತರಿದ್ದರು.

ಒಳತ್ತಡ್ಕ ಅಂಗನವಾಡಿ ಕಾರ್ಯಕರ್ತೆ ಕುಸುಮಾವತಿ ಸ್ವಾಗತಿಸಿ, ಮಚ್ಚಿಮಲೆ ಅಂಗನವಾಡಿ ಕಾರ್ಯಕರ್ತೆ ಸಾವಿತ್ರಿ ಕೆ. ವಂದಿಸಿದರು. ಅಂಗನವಾಡಿ ಸಹಾಯಕಿ ದೀಪ ಸಹಕರಿಸಿದರು. ಕಾರ್ಯಕ್ರಮದ ಅಂಗವಾಗಿ ಆರ್ಯಾಪು ಗ್ರಾಮಪಂಚಾಯತ್ ಸದಸ್ಯರಾದ ಸುಬ್ರಹ್ಮಣ್ಯ ಬಲ್ಯಾಯರವರ ವತಿಯಿಂದ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here