ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆಯಲ್ಲಿ ಸ್ಥಾಪನಾ ದಿನಾಚರಣೆ

0

ಕಾಣಿಯೂರು: ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘವು ಸ್ಥಾಪನೆಗೊಂಡು 21 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಸಂಘದ ಸ್ಥಾಪನಾ ದಿನಾಚರಣೆಯು ಕಾಣಿಯೂರು ರಾಶಿ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆಯಲ್ಲಿ ಸೆ 2ರಂದು ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಸಲಹಾ ಸಮಿತಿ ಸದಸ್ಯ ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಮಾತನಾಡಿ, ಸಂಘದ ಕಾಣಿಯೂರು ಶಾಖೆಯು ಪ್ರಾರಂಭಗೊಂಡ ಅತ್ಯಲ್ಪ ಅವಧಿಯಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಾ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದ್ದು, ಪ್ರಥಮ ಶ್ರೇಣಿಯನ್ನು ಪಡೆಯುವಂತಾಗಳು ಸದಸ್ಯರ, ಸಿಬ್ಬಂದಿಗಳ ಹಾಗೂ ಗ್ರಾಹಕರ ಸಹಕಾರ ಅಗತ್ಯ ಎಂದರು. ಸಲಹಾ ಸಮಿತಿ ಸದಸ್ಯರಾದ ಚಂದ್ರಶೇಖರ್ ಬರೆಪ್ಪಾಡಿ, ಎಂ. ಎನ್. ಗೌಡ ಕಾಣಿಯೂರು, ವಿಶ್ವನಾಥ ಗೌಡ ಅಂಬುಲ ಹಾಗೂ ಗ್ರಾಹಕರು ಉಪಸ್ಥಿತರಿದ್ದರು. ಶಾಖಾ ವ್ಯವಸ್ಥಾಪಕಾರದ ಪದ್ಮಶ್ರೀ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳಾದ ಪ್ರೀತಮ್ ಮಾಚಿಲ, ಹಿತೇಶ್ ಮೆದು, ಪಿಗ್ಮಿ ಸಂಗ್ರಾಹಕರಾದ ಕಿಶನ್, ಸುರೇಶ್ ಸಹಕರಿಸಿದರು.

LEAVE A REPLY

Please enter your comment!
Please enter your name here