ಶ್ರೀ ಕ್ಷೇತ್ರ ಹನುಮಗಿರಿಗೆ ಸುಪ್ರೀಂ ಕೋರ್ಟ್ ನ್ಯಾ. ಸರಸ ವೆಂಕಟ ನಾರಾಯಣ ಭಟ್ಟಿ ಭೇಟಿ

0

ಈಶ್ವರಮಂಗಲ: ಶ್ರೀ ಕ್ಷೇತ್ರ ಹನುಮಗಿರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸರಸ ವೆಂಕಟನಾರಾಯಣ ಭಟ್ಟಿ ರವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಶ್ರೀ ಭಾರತಿ ಅಮರ ಜ್ಯೋತಿ ಮಂದಿರ ಅಮರಗಿರಿಗೆ ಭೇಟಿ ನೀಡಿ ಮಂದಿರದ ಕಲ್ಪನೆ ಮತ್ತು ಧರ್ಮಶ್ರೀ ಪ್ರತಿಷ್ಠಾನದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ, ಧರ್ಮದರ್ಶಿಗಳಾದ ಶಿವರಾಂ ಪಿ, ಶಿವರಾಮ ಶರ್ಮ, ಹಿರಿಯ ವಕೀಲರಾದ ಅರುಣ್‌ಶ್ಯಾಮ್, ರಾಜಶೇಖರ್, ಶಾಂತಿಭೂಷಣ್, ಪವನಚಂದ್ರ ಶೆಟ್ಟಿ, ಸಚಿನ್, ಶ್ಯಾಮ್ ಸುದರ್ಶನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here