ವಿಟ್ಲ: ಸಸ್ಯಮೇಳ, ಆಹಾರ ಮೇಳ, ಮ್ಯೂಸಿಕಲ್ ನೈಟ್ ಕಾರ್ಯಕ್ರಮಕ್ಕೆ ಚಾಲನೆ

0

ವಿಟ್ಲ: ಇಲ್ಲಿನ ಜೆಎಲ್ ಅಡಿಟೋರಿಯಂನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಸಸ್ಯಮೇಳ, ಆಹಾರ ಮೇಳ ಹಾಗೂ ಮ್ಯೂಸಿಕಲ್ ನೈಟ್ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಅಧ್ಯಕ್ಷ, ವಿಟಿವಿ ಮುಖ್ಯಸ್ಥರಾದ ರಾಮದಾಸ್ ಶೆಟ್ಟಿ ವಿಟ್ಲರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಲಯನ್ಸ್ ಜಿಲ್ಲೆ 317-ಡಿ ನಿಕಟ ಪೂರ್ವ ಪ್ರಾಂತೀಯ ಅಧ್ಯಕ್ಷರು ವಿ.ಎನ್ ಸುದರ್ಶನ್ ಪಡಿಯಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಅತಿಥಿಗಳಾಗಿ ಆಹಾರ ಮೇಳದ ವ್ಯವಸ್ಥಾಪಕ ಜಯರಾಮ್ ಬುಳೇರಿಕಟ್ಟೆ, ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಸದಾನಂದ ಗೌಡ ಸೇರಾಜೆ, ಲಯನ್ಸ್ ಕ್ಲಬ್ ವಿಟ್ಲ ಸಿಟಿ ನಿರ್ದೇಶಕ ಮೋಹನ್ ಕಟ್ಟೆ, ಆಹಾರ ಮೇಳದ ವ್ಯವಸ್ಥಾಪಕ ಪ್ರಶಾಂತ್ ರೈ,ಲಯನ್ಸ್ ವಿಟ್ಲ ಸಿಟಿ ಅಧ್ಯಕ್ಷ ಜಯರಾಮ್ ಬಲ್ಲಾಳ್ ವಿಟ್ಲ ಅರಮನೆ, ಪುತ್ತೂರು ಶಾರದಾಂಬಾ ವಿವಿಧೋzಶ ಸಹಕಾರಿ ಸಂಘ ಅಧ್ಯಕ್ಷ ವಿಜಯ್ ಕುಮಾರ್ ಕೈಪಂಗಳ, ವಿಟ್ಲ ಜೆ.ಎಲ್ ಆಡಿಟೋರಿಯಂ ಮಾಲಕ ಗುರುರಾಜ್ ಎನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಹಾಲಿಂಗ ನಾಯ್ಕ ಅಮೈ ರವರನ್ನು ಸನ್ಮಾನಿಸಲಾಯಿತು. ಅಶ್ವಿನಿ ಪೆರುವಾಯಿ ಕಾರ್ಯಕ್ರಮ ನಿರೂಪಿಸಿ, ಜಯರಾಮ್ ಬಲ್ಲಾಳ್ ವಂದಿಸಿದರು.

LEAVE A REPLY

Please enter your comment!
Please enter your name here