ಕಲ್ಲಡ್ಕ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮಾಣಿ ಕರ್ನಾಟಕ ಪ್ರೌಢಶಾಲೆಯ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ

0

ವಿಟ್ಲ: ಶೇಡಿಗುರಿ – ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆಯಲ್ಲಿ ನಡೆದ 2023-24ನೇ ಸಾಲಿನ ಬಂಟ್ವಾಳ ತಾಲೂಕು ಪ್ರೌಢಶಾಲಾ 17ರ ವಯೋಮಾನದ ಬಾಲಕರ ಕಲ್ಲಡ್ಕ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮಾಣಿ ಕರ್ನಾಟಕ ಪ್ರೌಢಶಾಲೆಯ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ಇವರಿಗೆ ಹಿಂದಿ ಶಿಕ್ಷಕರಾದ ಜಯರಾಮ ಕಾಂಚನ ಹಾಗೂ ಹಿರಿಯ ವಿದ್ಯಾರ್ಥಿ ಖಿಳ್ರ್ ಅಬ್ಬಾಸ್ ತರಬೇತಿ ನೀಡಿದ್ದಾರೆ. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕಿರಣ್ ಹೆಗ್ಡೆ, ಶಾಲಾ ಸಂಚಾಲಕ ಹಾಜಿ ಇಬ್ರಾಹಿಂ ಮಾಣಿ. ಮುಖ್ಯ ಶಿಕ್ಷಕ ಎಸ್. ಚೆನ್ನಪ್ಪ ಗೌಡ ಮೊದಲಾದವರು ಸಹಕರಿಸಿದರು.

LEAVE A REPLY

Please enter your comment!
Please enter your name here