ಎಡನೀರು ಶ್ರೀಗಳ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ

0

ಪುತ್ತೂರು: ಎಡನೀರು ಶ್ರೀ ಮಠದಲ್ಲಿ ಶ್ರೀ ಸಚ್ಚಿದಾನಂದಭಾರತೀ ಶ್ರೀಗಳ ತೃತೀಯ ಚಾತುರ್ಮಾಸ್ಯ ವ್ರತಾಚರಣೆ ಹಿನ್ನೆಲೆಯಲ್ಲಿ ಸೆ.4ರಂದು ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಿತು.
ಕಲ್ಲಾರೆ ಶ್ರೀ ರಾಘವೇಂದ್ರ ಮಠದಿಂದ ಹೊರಟ ಹೊರೆಕಾಣಿಕೆ ವಾಹನಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಎಡನೀರು ಶೀಗಳ ಚಾತುರ್ಮಾಸ್ಯ ವ್ರತಾಚರಣೆಯ ಪುತ್ತೂರು ವಲಯ ಸಮಿತಿ ಅಧ್ಯಕ್ಷ ಡಾ. ಭಾಸ್ಕರ್ ಎಸ್, ಕಲ್ಲಾರೆ ಶ್ರೀ ಗುರರಾಘವೇಂದ್ರ ಸ್ವಾಮಿ ಮಠದ ಕಾರ್ಯದರ್ಶಿ ಯು.ಪೂವಪ್ಪ, ಪ್ರಭಾರಕ ಮುಗೇರು, ಶರತ್ ಕುಮಾರ್, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ನಾಗರಾಜ್ ಭಟ್ ನಡುವಡ್ಕ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here