ಸೆ.6: ಭಕ್ತಕೋಡಿಯಲ್ಲಿ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

0

ಸ್ಪರ್ಧಾ ಕಾರ್ಯಕ್ರಮ-ವಿಠಲ ನಾಯಕ್ ಸಾರಥ್ಯದಲ್ಲಿ ಗೀತಾ ಸಾಹಿತ್ಯ ಸಂಭ್ರಮ

ಪುತ್ತೂರು: ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ಮತ್ತು ಶ್ರೀ ಗೌರಿ ಮಹಿಳಾ ಮಂಡಲ ಸರ್ವೆ ಇದರ ಆಶ್ರಯದಲ್ಲಿ 22ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.6ರಂದು ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಆವರಣದಲ್ಲಿ ನಡೆಯಲಿದೆ.


ಬೆಳಿಗ್ಗೆ ಗಂಟೆ 8-30ಕ್ಕೆ ಭಕ್ತಕೋಡಿ ಅಂಗನವಾಡಿ ವಠಾರದಿಂದ ಶ್ರೀಕೃಷ್ಣ ವೇಷಧಾರಿ ಪುಟಾಣಿಗಳ ಜೊತೆ ಭಜನಾ ಮೆರವಣಿಗೆ ನಡೆಯಲಿದ್ದು ಬಳಿಕ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಷಣ್ಮುಖ ಯುವಕ ಮಂಡಲದ ಗೌರವಾಧ್ಯಕ್ಷರಾದ ಎಸ್.ಡಿ ವಸಂತ ಅಧ್ಯಕ್ಷತೆ ವಹಿಸಲಿದ್ದು ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಇದರ ಪ್ರ.ಕಾರ್ಯದಶಿ ಸುರೇಶ್ ರೈ ಸೂಡಿಮುಳ್ಳು ಉದ್ಘಾಟಿಸಲಿದ್ದಾರೆ. ಪುತ್ತೂರು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲ್ಯಾನ್, ಕೊಂಬೆಟ್ಟು ತಾಲೂಕು ಕ್ರೀಡಾಂಗಣದ ಮೇಲ್ವಿಚಾರಕರಾದ ಶ್ರೀಕಾಂತ್ ಬಿರಾವು ಸಹಿತ ಹಲವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.

ಮದ್ಯಾಹ್ನ ಗಂಟೆ 2.00ರಿಂದ ವಿಠಲ ನಾಯಕ್ ಕಲ್ಲಡ್ಕ ಅವರ ಸಾರಥ್ಯದಲ್ಲಿ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ ಎಂದು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಸಂಯೋಜಕರಾದ ಸುಬ್ರಹ್ಮಣ್ಯ ಕರುಂಬಾರು, ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಗೌತಮ್‌ರಾಜ್ ಕರುಂಬಾರು, ಪ್ರ.ಕಾರ್ಯದರ್ಶಿ ಮನೋಜ್ ಸುವರ್ಣ ಸೊರಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here