ಆತೂರು ಸದಾಶಿವ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ

0

ಕಡಬ: ಮಳೆ ಪ್ರಮಾಣ ಕ್ಷೀಣವಾದ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥಿಸಲಾಯಿತು.
ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯರವರು ಪ್ರಾರ್ಥನೆ ನೆರವೇರಿಸಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ, ಅಭಿವೃದ್ದಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ವಿವಿಧ ಸಮಿತಿ ಪದಾಧಿಕಾರಿಗಳಾದ ವಿನಯ ರೈ ಪಟ್ಟೆ ಕೊಯಿಲ, ಬಾಲಕೃಷ್ಣ ಗೌಡ ಬೇಂಗದಪಡ್ಪು, ಲಕ್ಷ್ಮೀ ನಾರಾಯಣ ರಾವ್ ಆತೂರು, ಶಶಿ ಅಂಬಾ, ಶಾಂತರಾಮ ಬೇಂಗದಪಡ್ಪು, ಸೋಮನಾಥ ಪಲ್ಲಡ್ಕ , ಭವಿತ್ ಪಲ್ಲಡ್ಕ, ಮೊದಲಾದವರು ಇದ್ದರು.

LEAVE A REPLY

Please enter your comment!
Please enter your name here