ಮಂಗಳೂರು ಕಮಿಷನರ್ ಕುಲದೀಪ್ ಜೈನ್ ವರ್ಗಾವಣೆ,ಅನುಪಮ್ ಅಗರ್‌ವಾಲ್ ನೂತನ ಕಮೀಷನರ್

0

ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರಿಗೆ ವರ್ಗಾವಣೆಯಾಗಿದೆ.ನೂತನ ಕಮೀಷನರ್ ಆಗಿ ಅನುಪಮ್ ಅಗರ್‌ವಾಲ್ ಅವರನ್ನು ಸರಕಾರ ನೇಮಿಸಿ ಆದೇಶಿಸಿದೆ.2008ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಅನುಪಮ್ ಅಗರ್‌ವಾಲ್ , ರಾಜಸ್ಥಾನದ ಜೋಧ್‌ಪುರ ಮೂಲದವರು. ಇಲ್ಲಿಗೆ ಬರುವ ಮೊದಲು ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಈ ಹಿಂದೆ ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪ ಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು, ಬಳಿಕ 2023ರ ಜನವರಿಯಲ್ಲಿ ಕಲಬುರಗಿಯಲ್ಲಿ ನೂತನ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೋಲೀಸ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.ಇದೀಗ ಮಂಗಳೂರಿಗೆ ವರ್ಗಾವಣೆಯಾಗಿದೆ.

LEAVE A REPLY

Please enter your comment!
Please enter your name here