ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ- ಲಾರಿ ಸಹಿತ ಓರ್ವನ ಬಂಧನ

0

ಉಪ್ಪಿನಂಗಡಿ: ಅಕ್ರಮವಾಗಿ ಮರವನ್ನು ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಪತ್ತೆ ಹಚ್ಚಿ ಒರ್ವ ಆರೋಪಿಯನ್ನು ಬಂಧಿಸಿದೆ.


ಲಾರಿಯೊಂದರಲ್ಲಿ ಹೆಬ್ಬಲಸು, ನಂದಿ, ಬಣ್ಪು, ಸೇರಿದಂತೆ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖಾಧಿಕಾರಿಗಳು ಸುಬ್ರಹ್ಮಣ್ಯ ಕ್ರಾಸ್ ಬಳಿ ತಪಾಸನೆ ನಡೆಸಿ ಮರಮಟ್ಟುಗಳನ್ನು ಸಾಗಾಟಕ್ಕೆ ಬಳಸಿದ ಲಾರಿಯೊಂದಿಗೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ತಾಲೂಕು ಪಂಜಿಕರ್ ಗ್ರಾಮ ನಿವಾಸಿ ಜೀವನ್ ರಾಜ್ ಎಂಬಾತ ಬಂಧಿತ ಆರೋಪಿ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್, ಉಪ ವಲಯ ಅರಣ್ಯಾಧಿಕಾರಿ ರಾವುತ್ತಪ್ಪ ಬಿರಾದಾರ್, ರೆಖ್ಯಾ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ತಡ್ಲಾಗಿ, ರಾಜೇಶ್, ಪ್ರತಾಪ್, ರವಿ, ಕಿಶೋರ್ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here