ಸೆ.7: ಸುಬ್ರಹ್ಮಣ್ಯದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ  ಸಮಾಲೋಚನಾ ಸಭೆ

0

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಹಾಗೂ ಅರಣ್ಯದ ಗಡಿಭಾಗಗಳಲ್ಲಿ ಹಲವು ದಶಕಗಳಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರಿಗೆ ಜಂಟಿ ಸರ್ವೇಯನ್ನು ಮಾಡಿಸಿ ಅಕ್ರಮ ಸಕ್ರಮ ಹಾಗೂ 94ಸಿ ಅಡಿಯಲ್ಲಿ ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳಲು ಸೆ.07ರಂದು ಬೆಳಿಗ್ಗೆ 11:00 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಲಿದೆ.

ಸಮಾನಮನಸ್ಕರು ಹಾಗೂ ಸಂಘಸಂಸ್ಥೆಗಳ ರಾಜಕೀಯ ಮುಖ್ಯಸ್ಥರು ಹಾಗೂ ಸದಸ್ಯರು ಉಪಸ್ಥಿತರಿದ್ದು, ಸಲಹೆ ಸೂಚನೆಗಳನ್ನು ನೀಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here