ರಾಜ್ಯ ಮಟ್ಟದ ವಿದ್ಯಾಭಾರತಿ ಕರ್ನಾಟಕ ಜ್ಞಾನ-ವಿಜ್ಞಾನ ಮೇಳದಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳು ಝೋನಲ್ ಲೆವೆಲ್ ಗೆ ಆಯ್ಕೆ

0

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಇದೇ ಸೆಪ್ಟೆಂಬರ್ 2 ಹಾಗೂ 3ರಂದು ಕಲ್ಬುರ್ಗಿಯಲ್ಲಿ ನಡೆದ ಪ್ರಾಂತೀಯ ಗಣಿತ- ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ- 2023 ಇದರಲ್ಲಿ ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಗಳಿಸಿರುತ್ತಾರೆ.

ಕಿಶೋರವರ್ಗದ ವಿಜ್ಞಾನ ರಸಪ್ರಶ್ನೆಯಲ್ಲಿ ಚಿರಾಗ್ ಡಿ. ಗೌಡ, ಆಕಾಂಕ್ಷ್ ಪಿ, ಅನೀಶ್ ಪ್ರಭು ಪ್ರಥಮ ಹಾಗೂ ಕ್ಲೇ ಮೋಡೆಲಿಂಗ್ ಸ್ಪರ್ಧೆಯಲ್ಲಿ ಸಂಚಯ್ ಎಸ್. ಗೌಡ ಪ್ರಥಮ ಮತ್ತು ಕಥಾ ಕಥನದಲ್ಲಿ ಆಪ್ತ ಚಂದ್ರಮತಿ ಮುಳಿಯ ಇವರು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ, ಸೆ.30, ಅ.1 ಹಾಗೂ 2ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆಯಲಿರುವ ಝೋನಲ್ ಲೆವೆಲ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here