ಕಾಣಿಯೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

0

ಕಾಣಿಯೂರು: ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 11ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸೆ.6ರಂದು ನಡೆಯಿತು.

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸವಣೂರು ವಲಯದ ಮೇಲ್ವಿಚಾರಕಿ ಹರ್ಷ ಕುಮಾರಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ ವಹಿಸಿದ್ದರು. ಕಾಣಿಯೂರು ಸ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕಿ ಮೋಹಿನಿ, ಕಾಣಿಯೂರು ಕಣ್ವರ್ಷಿ ಮಹಿಳಾ ಮಂಡಲದ ಕಾರ್ಯದರ್ಶಿ ನಾಗವೇಣಿ ಬೆದ್ರಾಜೆ, ಯುವಕ ಮಂಡಲದ ಕಾರ್ಯದರ್ಶಿ ದೀಕ್ಷಿತ್ ಕಂಪ ಉಪಸ್ಥಿತರಿದ್ದರು.

ಯುವಕ ಮಂಡಲದ ಸುರೇಶ್ ಓಡಬಾಯಿ, ಸಂತೋಷ್ ಮುಗರಂಜ, ರಚನ್ ಬರಮೇಲು, ವಸಂತ ಪೆರ್ಲೋಡಿ, ಹರ್ಷಿತ್ ಅನಿಲ, ಪುನೀತ್ ಕಲ್ಪಡ, ಅತಿಥಿಗಳನ್ನು ಗೌರವಿಸಿದರು. ಕಾಣಿಯೂರು ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಯುವಕ ಮಂಡಲದ ಕಾನೂನು ಸಲಹೆಗಾರರಾದ ರಾಧಾಕೃಷ್ಣ ಸಾರಿತ್ತಾಡಿ ಸ್ವಾಗತಿಸಿ, ಸುರೇಶ್ ಓಡಬಾಯಿ ವಂದಿಸಿದರು. ಸದಸ್ಯರಾದ ಪರಮೇಶ್ವರ ಅನಿಲ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here