ಕೆಯ್ಯೂರು ದೇವಳದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆ ಉತ್ಸವ

0

ಕೆಯ್ಯೂರು: ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನ ಕೆಯ್ಯೂರು ಮತ್ತು ವಿಶ್ವ ಹಿಂದೂ ಪರಿಷತ್ ಭಜರಂಗದಳ ಕೆಯ್ಯೂರು ಘಟಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ವರ್ದೆಗಳು ಸೆ.6ರಂದು ಕೆಯ್ಯೂರು ದೇವಳದ ವಠಾರದಲ್ಲಿ ನಡೆಯಿತು. ದೇವಳದ ಪ್ರಧಾನ ಅರ್ಚಕರಾದ ಶ್ರೀನಿವಾಸ ರಾವ್ , ಆನಂದ ಭಟ್ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿ, ಭಾರತ ಮಾತೆಗೆ ಪೋಟೋಗೆ ಪುಷ್ಪಾರ್ಚನೆ ಮಾಡಿ, ದೀಪ ಪ್ರಜ್ವಲಿಸಿ , ತೆಂಗಿನಕಾಯಿ ಒಡೆಯುದರ ಮೂಲಕ ಕೆಯ್ಯೂರು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶಶಿಧರ ರಾವ್ ಬೊಳಿಕಲ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರಾದ ರಾಮಣ್ಣ ಗೌಡ ಮಾಡಾವು, ವಿಶ್ವನಾಥ ಶೆಟ್ಟಿ ಸಾಗು, ಪದ್ಮನಾಭ ಪಿ.ಎಸ್ ಪಲ್ಲತ್ತಡ್ಕ, ಚರಣ್ ಕುಮಾರ್ ಸಣಂಗಳ, ಬಾಬು ಪಾಟಾಳಿ ದೇರ್ಲ, ಈಶ್ವರಿ ಜೆ ರೈ ಸಂತೋಷ್ ನಗರ, ಮಮತಾ ರೈ ಕೆಯ್ಯೂರು, ಶ್ರೀ ದುರ್ಗಾ ಭಜನಾ ಮಂಡಳಿ ಅದ್ಯಕ್ಷ ದೇವಣ್ಣ ನಾಯ್ಕ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಕೆಯ್ಯೂರು ಘಟಕದ ಸರ್ವ ಕಾರ್ಯಕರ್ತರು, ಸಂಘ ಸಂಸ್ಥೆಗಳು, ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here