ಎಡಮಂಗಲ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ “ಉತ್ತಮ ಸಂಘ” ಪ್ರಶಸ್ತಿ

0

ಕಾಣಿಯೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಕೊಡಮಾಡುವ 2022-23ನೇ ಸಾಲಿನ ಉತ್ತಮ ಸಂಘ ಪ್ರಶಸ್ತಿಯನ್ನು ಎಡಮಂಗಲ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ.
ಸೆ.5ರಂದು ಮಂಗಳೂರಿನ ಕುಲಶೇಖರ ಕೋರ್ಡೆಲ್ ಹಾಲ್ ಚರ್ಚ್ಗೇಟ್ ಸಭಾಂಗಣದಲ್ಲಿ ನಡೆದ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್. ಬಿ. ಜಯರಾಮ ರೈ ಬಳಜ್ಜ ಹಾಗೂ ನಿರ್ದೇಶಕರು ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಕಟ್ಟಬೀಡು ಮತ್ತು ಕಾರ್ಯದರ್ಶಿ ಮಾಧವ ವೈ ಪ್ರಶಸ್ತಿ ಸ್ವೀಕರಿಸಿದರು.

LEAVE A REPLY

Please enter your comment!
Please enter your name here