ಹಿರೆಬಂಡಾಡಿ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

0

ಹಿರೆಬಂಡಾಡಿ: ಶ್ರೀ ಷಣ್ಮುಖ ಮಿತ್ರವೃಂದ ಹಿರೆಬಂಡಾಡಿ ಇದರ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸೆ.3ರಂದು ಹಿರೆಬಂಡಾಡಿ ಗ್ರಾ.ಪಂ.ಸಮುದಾಯ ಭವನದಲ್ಲಿ ನಡೆಯಿತು.


ಮಾಜಿ ಶಾಸಕ ಸಂಜೀವ ಮಠಂದೂರು ಅವರು ಶಿಬಿರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಯುವಶಕ್ತಿಯು ರಾಷ್ಟ್ರಶಕ್ತಿಯಾಗಿ ಮೂಡಿಬಂದಾಗ ಜಗತ್ತಿನಲ್ಲಿ ಭಾರತವು ಸುಪರ್ ಪವರ್ ದೇಶವಾಗಿ ಮೂಡಿಬರಲು ಸಾಧ್ಯವಿದೆ. ಯುವ ಶಕ್ತಿಯು ಸಮಾಜಮುಖಿಯಾಗಿ ಒಂದಷ್ಟು ಚಟುವಟಿಕೆಗಳನ್ನು ಮಾಡಿದಾಗ ಸಮಾಜದಲ್ಲಿ ಒಂದಷ್ಟು ಪರಿವರ್ತನೆಗಳನ್ನು ಪ್ರಾರಂಭಿಸಲು ಸಾಧ್ಯವಿದೆ ಎಂದರು. ಹಿರೆಬಂಡಾಡಿ ಗ್ರಾ.ಪಂ.ಅಧ್ಯಕ್ಷ ಸದಾನಂದ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಬಿಲ್ಲವ ಸಂಘ ಪುತ್ತೂರು ತಾಲೂಕು ಸಮಿತಿ ಉಪಾಧ್ಯಕ್ಷ ಅಶೋಕ್ ಪಡ್ಪು, ಷಣ್ಮುಖ ಮಿತ್ರವೃಂದದ ಅಧ್ಯಕ್ಷ ರಮೇಶ್, ರೋಟರಿ ಬ್ಲಡ್ ಬ್ಯಾಂಕ್‌ನ ವೈದ್ಯ ರಾಮಚಂದ್ರ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಸದಸ್ಯ ಗಣೇಶ್ ಕುಂದರ್ ಸ್ವಾಗತಿಸಿ, ವಿನೋದ್‌ರಾಜ್ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಸಂಘದ ಸದಸ್ಯರು, ಗ್ರಾ.ಪಂ.ಸದಸ್ಯರು, ಗರಾಮಸ್ಥರು ಉಪಸ್ಥಿತರಿದ್ದರು. ನಂತರ ಸ್ವಯಂ ಪ್ರೇರಿತ ರಕ್ತದಾನ ನಡೆಯಿತು.

LEAVE A REPLY

Please enter your comment!
Please enter your name here