ಸೆ.10: ನೆಹರುನಗರ ಲಿಂಗನಗುಡ್ಡೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

0

ಪುತ್ತೂರು: ನೆಹರುನಗರ ಶಿವಮಣಿ ಕಲಾಸಂಘ ಶಿವನಗರ ಇದರ ವತಿಯಿಂದ 2ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಸೆ.10ರಂದು ಲಿಂಗನಗುಡ್ಡೆ ಶ್ರೀ ಸೋಮಲಿಂಗೇಶ್ವರ ಭಜನಾ ಮಂದಿರದಲ್ಲಿ ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ನಡೆಯಲಿದೆ.


ಲಿಂಗನಗುಡ್ಡೆ ಶ್ರೀ ಸೋಮಲಿಂಗೇಶ್ವರ ಮಂದಿರದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ನಾಯ್ಕ್ ಬೆಳಿಗ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಳಿಕ ಕೃಷ್ಣ ವೇಷ ಸ್ಪರ್ಧೆ, ವಿವಿಧ ಆಟೋಟ ಸ್ಪರ್ಧೆ ನಡೆಯಲಿದೆ. ಸಂಜೆ ಸಮಾರೋಪದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲಿಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿಯವರಿಗೆ ಇದೇ ಸಂದರ್ಭದಲ್ಲಿ ಕಲಾ ಸಂಘದ ವತಿಯಿಂದ ಬಿರುದು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಉಪನ್ಯಾಸಕ ಶ್ರೀಕೃಷ್ಣ ಉಪಾಧ್ಯಾಯ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ ಎಂದು ಶಿವಮಣಿ ಕಲಾಸಂಘದ ಅಧ್ಯಕ್ಷ ಸುದರ್ಶನ್ ಮತ್ತು ಸಂಚಾಲಕ ಮನುಕುಮಾರ್ ಎನ್ ಎಸ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here