ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ‘ಶ್ರೀ ಕೃಷ್ಣ ಲೀಲೋತ್ಸವ’ ಉದ್ಘಾಟನೆ

0

ನರಿಮೊಗರು : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ‘ಶ್ರೀ ಕೃಷ್ಣ ಲೀಲೋತ್ಸವ’ ಕಾರ್ಯಕ್ರಮ ಸೆ.7 ರಂದು ಸಂಸ್ಥೆಯ ಗೋಪಾಲಕೃಷ್ಣ ಮಂದಿರ ವೇದಿಕೆಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಕಾಯ ಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸುಜಯ್ ಕೃಷ್ಣ ತಂತ್ರಿ ಕೆಮ್ಮಿಂಜೆ ರವರು ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶಿಬರ ಜಯರಾಮ ಕೆದಿಲಾಯ ವಹಿಸಿದ್ದರುಶಾಲಾ ಪೋಷಕರೂ ,ಉದ್ಯಮಿಗಳಾದ ಮೋಹನ್ ಬಾಬು ಜೆ.,ಅಶ್ವಿನಿ ರಾಜೇಶ್ ,ಸಂಚಾಲಕರಾದ ಎಚ್.ಭಾಸ್ಕರ ಆಚಾರ್ ಹಿಂದಾರು, ಆಡಳಿತ ಮಂಡಳಿಯ ಸದಸ್ಯರಾದ ಹರೀಶ್ ಪುತ್ತೂರಾಯ,ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಉಪಸ್ಥಿತರಿದ್ದರು.ಆಡಳಿತ ಮಂಡಳಿ ಕಾರ್ಯದರ್ಶಿ ಶ್ರೀಕೃಷ್ಣಪ್ರಸಾದ್ ಕೆದಿಲಾಯ ಸ್ವಾಗತಿಸಿದರು.ಮುಖ್ಯಶಿಕ್ಷಕಿ ಜಯಮಾಲಾ ವಿ.ಎನ್ ಪ್ರಸ್ತಾವನೆಗೈದರು.

LEAVE A REPLY

Please enter your comment!
Please enter your name here