ಸೆ.10: ಕೆದಂಬಾಡಿ ಯುವರಂಗ ದ ವತಿಯಿಂದ ಶ್ರೀರಾಮ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

0

ಪುತ್ತೂರು: ಯುವರಂಗ ಕೆದಂಬಾಡಿ ಇದರ ಆಶ್ರಯದಲ್ಲಿ ಶ್ರೀರಾಮ ಮಂದಿರ ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಇದರ ಸಹಕಾರದೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಸೆ.10ರಂದು ಕೆದಂಬಾಡಿ ಶ್ರೀರಾಮ ಮಂದಿರದ ವಠಾರದಲ್ಲಿ ನಡೆಯಲಿದೆ.

ಉದ್ಘಾಟನೆ
ಕಾರ್ಯಕ್ರಮವನ್ನು ನಬಾರ್ಡ್ ಪ್ರಾದೇಶಿಕ ಕಾರ್ಯಕ್ರಮ ಅಧಿಕಾರಿ ರಾಮಕೃಷ್ಣ ಆಳ್ವ ಮುಂಡಾಳಗುತ್ತು ಉದ್ಘಾಟಿಸಲಿದ್ದಾರೆ. ಬಳಿಕ ಶ್ರೀಕೃಷ್ಣ ವೇಷ ಸ್ಪರ್ಧೆ ಸೇರಿದಂತೆ ಹಲವು ಕ್ರೀಡಾ ಸ್ಪರ್ಧೆಗಳು ನಡೆಯಲಿವೆ.

ಸಭಾ ಕಾರ್ಯಕ್ರಮ
ಬೆಳಿಗ್ಗೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮ ಮಂದಿರದ ಅಧ್ಯಕ್ಷ ಜೈಶಂಕರ ರೈ ಬೆದ್ರುಮಾರ್ ವಹಿಸಲಿದ್ದಾರೆ. ಆಲಡ್ಕ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ ರೈ ಬೋಳೋಡಿ, ಕೆದಂಬಾಡಿ ಗ್ರಾಮ ಸಮಿತಿ ಒಕ್ಕಲಿಗ ಸ್ವಸಹಾಯ ಸಂಘದ ಅಧ್ಯಕ್ಷ ಶಿವಣ್ಣ ಗೌಡ ಪಯಂದೂರು, ಯುವಸಬಲೀಕರಣ ಕ್ರೀಡಾ ಇಲಾಖೆ ಪುತ್ತೂರು ಮೇಲ್ವಿಚಾರಕ ಶ್ರೀಕಾಂತ್ ಪೂಜಾರಿ ಬಿರಾವು, ವಕೀಲೆ ಅಶ್ವಿನಿ ಎಸ್. ರೈ ಕುರಿಕ್ಕಾರ, ಕೆದಂಬಾಡಿ ಪ್ರಾಥಮಿಕ ಶಾಲಾ ಮುಖ್ಯಗುರು ನಾಗವೇಣಿ ಕೆ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಿರಿಯ ಭಜನಾ ಸಂಕೀರ್ತನಾಕಾರ ಬೆದ್ರುಮಾರ್ ಸಾಯಿಪ್ರಸಾದ್ ರೈಯವರಿಗೆ ಇದೇ ವೇಳೆ ಗೌರವಾರ್ಪಣೆ ನಡೆಯಲಿದೆ.

ಸಮಾರೋಪ ಸಮಾರಂಭ
ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಯುವರಂಗ ಕೆದಂಬಾಡಿಯ ಅಧ್ಯಕ್ಷ ನಿತೇಶ್ ರೈ ಕೋರಂಗ ವಹಿಸಲಿದ್ದಾರೆ. ಶ್ರೀರಾಮ ಭಜನಾ ಸಮಿತಿಯ ಅಧ್ಯಕ್ಷ ಕರುಣಾಕರ ರೈ ಕೋರಂಗ ಬಹುಮಾನ ವಿತರಣೆ ಮಾಡಲಿದ್ದಾರೆ. ಮಧ್ಯಾಹ್ನ ಇದ್ಯಪೆ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ.

LEAVE A REPLY

Please enter your comment!
Please enter your name here