ಕಳವು ಪ್ರಕರಣದ ವಾರಂಟ್ ಆರೋಪಿ ಬಂಧನ

0

ಪುತ್ತೂರು: 3 ವರ್ಷದ ಹಿಂದೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ತಾರಿಗುಡ್ಡೆಯ ಮಹಮ್ಮದ್ ಸಲಾಂ ಅವರನ್ನು ಪೊಲೀಸರು ಬಂಧಿಸಿದ್ದಾರೆ.


ಮೂರ ವರ್ಷಗಳ ಹಿಂದೆ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಕಳವು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಚಿಕ್ಕಮುಡ್ನೂರು ಗ್ರಾಮದ ತಾರಿಗುಡ್ಡೆ ನಿವಾಸಿ ಮಹಮ್ಮದ್ ಸಲಾಂ ಯಾನೆ ಡಾಲರ್ ಸಲಾಂ ಯಾನೆ ಸಲಾಂ(33ವ)ರವರನ್ನು ಸಂಪ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ವಿರುದ್ಧ ವಿಟ್ಲ, ಕೇರಳ ಪೊಲೀಸ್ ಠಾಣೆಯಲ್ಲೂ ವಾರಂಟ್ ಜಾರಿಯಾಗಿದೆ.

LEAVE A REPLY

Please enter your comment!
Please enter your name here