ಸೆ.10ರಂದು ಕಡಬ ಪ್ರಖಂಡ ವಿ.ಹಿಂ.ಪ.ವತಿಯಿಂದ ಕಡಬದಲ್ಲಿ ಮೊಸರು ಕುಡಿಕೆ- ಶೋಭಾಯಾತ್ರೆ

0

ಕಡಬ: ಕಡಬ ಪ್ರಖಂಡ ವಿ.ಹಿಂ.ಪ.ಬಜರಂಗದಳ ಮಾತೃಶಕ್ತಿ, ದುರ್ಗಾವಾಹಿನಿ ವತಿಯುಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ, ಧಾರ್ಮಿಕ ಸಭೆ ಕಾರ್ಯಕ್ರಮವು ಸೆ.10ರಂದು ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ದಲ್ಲಿ ನಡೆಯಲಿದೆ.
ಬೆಳಿಗ್ಗೆ ಮಾತೃಶಕ್ತಿ ದುರ್ಗಾವಾಹಿನಿ ತಂಡಗಳಿಂದ ಭಜನಾ ಕಾರ್ಯಕ್ರಮ, ಬಳಿಕ ಮಹಿಳೆಯರಿಗೆ, ಪುರುಷರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಗಳು ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆದು ಕಡಬ ಪೇಟೆಯುದ್ದಕ್ಕೂ ಸಾಹಸಮಯ ಅಟ್ಟಿ ಮಡಿಕೆ ಹೊಡೆಯುವ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಇಲ್ಲಿ ವಾಗ್ಮಿ ಕು|ಹಾರಿಕಾ ಮಂಜುನಾಥ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ, ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿ.ಹಿಂ.ಪ. ಕಡಬ ಪ್ರ ಖಂಡ ಗೌರವಾಧ್ಯಕ್ಷ ವಾಸುದೇವ ಭಟ್, ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ಕಾರ್ಯದರ್ಶಿ ಜಯಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here