ಸೌಜನ್ಯ ಸಾವಿನ ನ್ಯಾಯಕ್ಕಾಗಿ ಹೋರಾಟದ ಹೊಸ ಹಾದಿ – ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರಿಂದ ಒಕ್ಕಲಿಗ ಗೌಡ ಸಮಾಜದ ಪ್ರಮುಖರಿಗೆ ಆಹ್ವಾನ

0

ನಾಳೆ (ಸೆ.10ಕ್ಕೆ) ಆದಿ ಚುಂಚನಗಿರಿ ಕ್ಷೇತ್ರಕ್ಕೆ ತೆರಳಲಿರುವ ಪುತ್ತೂರು ಸಹಿತ ಜಿಲ್ಲಾ ಕೇಂದ್ರದ ಪ್ರಮುಖರು

ಪುತ್ತೂರು: ಧರ್ಮಸ್ಥಳದಲ್ಲಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹಲವು ಹೋರಾಟಗಳು ನಡೆಯುತ್ತಿದ್ದು, ಇದೀಗ ಸೌಜನ್ಯ ಸಾವಿನ ನ್ಯಾಯಕ್ಕಾಗಿ ಹೋರಾಟದ ಹೊಸ ಹಾದಿ ಮತ್ತು ಈ ಕುರಿತು ಸಮಗ್ರವಾಗಿ ಚರ್ಚಿಸಲು ಆದಿ ಚುಂಚನಗಿರಿ ಮಠದ ಡಾ. ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ಆಹ್ವಾನದಂತೆ ಸೆ.10ರಂದು ದ.ಕ ಜಿಲ್ಲೆಯ ಹೆಚ್ಚು ಮಂದಿ ಒಕ್ಕಲಿಗ ಗೌಡ ಸಮುದಾಯದ ನಾಯಕರು ಆದಿ ಚುಂಚನಗಿರಿ ಕ್ಷೇತ್ರಕ್ಕೆ ತೆರಳಲಿದ್ದಾರೆ.


ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಪ್ರಧಾನ ಕಾರ್ಯದರ್ಶಿ ಸುಂದರ ಗೌಡ ನಡುಬೈಲು, ಸಲಹಾ ಸಮಿತಿ ಉಪಾಧ್ಯಕ್ಷ ಚಿದಾನಂದ ಬೈಲಾಡಿ, ಯುವ ಗೌಡ ಸಂಘದ ನಾಗೇಶ್ ಕೆಡೆಂಜಿ ಸಹಿತ ಹಲವು ಪ್ರಮುಖರು ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಲಿದ್ದಾರೆ.

LEAVE A REPLY

Please enter your comment!
Please enter your name here