ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ:ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ವಿದ್ಯಾಭಾರತಿ ಸಂಯೋಜಿತ ಶಾಲೆಗಳ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಆ.26ರಂದು ಶ್ರೀದೇವಿ ವಿದ್ಯಾ ಸಂಸ್ಥೆ ಪುಣಚದಲ್ಲಿ ನಡೆಯಿತು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 18 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ದೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. 

ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ (17ರ ವಯೋಮಾನದ) – ಪ್ರಮಥ.ಎಂ.ಭಟ್, 10ನೇ ತರಗತಿ(ಶ್ರೀ ರವಿನಾರಾಯಣ.ಎಂ ಮತ್ತು ಶ್ರೀಮತಿ ಶರಾವತಿ ದಂಪತಿ ಪುತ್ರ) ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಮಹಮ್ಮದ್ ರಿಹಾನ್, 10ನೇ ತರಗತಿ(ಶ್ರೀ ಎನ್.ಅಬ್ದುಲ್ ರಜಾಕ್ ಮತ್ತು ಶ್ರೀಮತಿ  ನಸೀಬ ಬಾನು  ದಂಪತಿ ಪುತ್ರ) ತೃತೀಯ ಸ್ಥಾನ ಪಡೆದಿರುತ್ತಾನೆ. 

ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ:(14ರ ವಯೋಮಾನದ) ವರ್ಷಿ.ರೈ, 7ನೇ ತರಗತಿ(ಶ್ರೀ ಶಶಿಧರ ರೈ ಮತ್ತು ಶ್ರೀಮತಿ ರವಿಕಲಾ ರೈ ದಂಪತಿ ಪುತ್ರಿ) ಪ್ರಥಮ ಸ್ಥಾನ, ಅಭಿಜ್ಞಾ ಶಾಂಭವಿ, 6ನೇ ತರಗತಿ(ಶ್ರೀ ಸುಧೀರ್ ಮತ್ತು ಶ್ರೀಮತಿ ಲತಾ ದಂಪತಿ ಪುತ್ರಿ) – ಪ್ರಥಮ ಸ್ಥಾನ, ಮಹತಿ, 6ನೇ ತರಗತಿ(ಶ್ರೀ ಶಿವರಂಜನ್.ಎಂ ಮತ್ತು ಶ್ರೀಮತಿ ಲಾವಣ್ಯ ಭಟ್  ದಂಪತಿ ಪುತ್ರಿ)-ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಿರಿ ಹಳೇಮನೆ, 7ನೇ ತರಗತಿ(ಶ್ರೀ ಶಿವಕುಮಾರ್.ಎಚ್ ಮತ್ತು ಶ್ರೀಮತಿ ಸಹನಾ ಶಿವಕುಮಾರ್ ದಂಪತಿ ಪುತ್ರಿ) ತೃತೀಯ ಸ್ಥಾನ ಪಡೆದಿರುತ್ತಾಳೆ. 

ಬಾಲವರ್ಗದ ಬಾಲಕಿಯರ ತಂಡ -ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದಿರುತ್ತಾರೆ ಹಾಗೂ 4 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

LEAVE A REPLY

Please enter your comment!
Please enter your name here