![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನೆಲ್ಯಾಡಿ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಗೋಳಿತ್ತೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸೆ.8ರಂದು ಪೌಷ್ಟಿಕ ಆಹಾರ ಸಪ್ತಾಹ ಮತ್ತು ಬಾಲ ವಿಕಾಸ ಸಮಿತಿ ಮತ್ತು ತಾಯಂದಿರ ಸಭೆ ನಡೆಸಲಾಯಿತು.
ಆರೋಗ್ಯ ಕಾರ್ಯಕರ್ತೆ ಲೀನ ಕೆ.ಎಮ್.,ರವರು ಪೌಷ್ಠಿಕ ಆಹಾರ ಸಪ್ತಾಹದ ಬಗ್ಗೆ ಮಾಹಿತಿ ನೀಡಿದರು. ಸ್ತ್ರೀ ಶಕ್ತಿ ಸಂಘದ ಸದಸ್ಯೆಯರು ಮತ್ತು ತಾಯಂದಿರು ವಿವಿಧ ರೀತಿಯ ಪೌಷ್ಠಿಕ ಆಹಾರವನ್ನು ತಯಾರು ಮಾಡಿ ತಂದಿದ್ದರು. ಇದೇ ಸಂದರ್ಭದಲ್ಲಿ ಅಮೃತ ಆರೋಗ್ಯ ಅಭಿಯಾನದಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. ಸಭೆಯಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರು, ಸದಸ್ಯರು, ಮಕ್ಕಳ ತಾಯಂದಿರು, ಸ್ತ್ರೀಶಕ್ತಿ ಸಂಘದ ಸದಸ್ಯೆಯರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ರೀತಾಕ್ಷಿ ಕೆ., ವಂದಿಸಿದರು. ಅಂಗನವಾಡಿ ಸಹಾಯಕಿ ಅಮಿತಾ ಸಹಕರಿಸಿದರು.
![](https://puttur.suddinews.com/wp-content/uploads/2023/09/golithottu-1.jpg)
![](https://puttur.suddinews.com/wp-content/uploads/2023/09/golithottu-2.jpg)