ರಾಷ್ಟ್ರೀಯ ಲೋಕ ಅದಾಲತ್-ದ.ಕ. ಜಿಲ್ಲೆಯಲ್ಲಿ 14,840 ಪ್ರಕರಣಗಳು ಇತ್ಯರ್ಥ

0

ಮಂಗಳೂರು : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವು ದ.ಕ. ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಸೆ.9 ರಂದು ನಡೆಯಿತು.

ಈ ಅದಾಲತ್‌ನಲ್ಲಿ 48 ಬೈಠಕ್‌ಗಳು ನಡೆದಿದ್ದು ಒಟ್ಟು 21,763 ಪ್ರಕರಣಗಳನ್ನು ಪರಿಗಣಿಸಲಾಗಿತ್ತು. ಅದರಲ್ಲಿ 14,840 ಪ್ರಕರಣಗಳು ರಾಜಿಯಲ್ಲಿ ಇತ್ಯರ್ಥವಾಗಿದೆ. ರಾಜಿ ಮೊತ್ತ 17,97,64,778 ರೂ.ವನ್ನು ಪರಿಹಾರ ರೂಪದಲ್ಲಿ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶ ರವೀಂದ್ರ ಎಂ. ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿ.ಜಿ. ತಿಳಿಸಿದ್ದಾರೆ.

ಈ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿ ಸಲಾಯಿತು. ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೆ ಇತ್ಯರ್ಥಪಡಿಸಿಕೊಂಡರು.

LEAVE A REPLY

Please enter your comment!
Please enter your name here